11:53 PM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಕೋಟೆಕಾರು ದರೋಡೆ ಪ್ರಕರಣ: ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; 3 ಮಂದಿ ಆರೋಪಿಗಳ ಬಂಧನ

21/01/2025, 22:38

ಮಂಗಳೂರು(reporterkarnataka.com): ಉಳ್ಳಾಲ ಸಮೀಪದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದಿಂದ ಸುಮಾರು 10 ಕೋಟಿ ರೂ. ಮೌಲ್ಯದ ನಗ ಮತ್ತು ನಗದು ದರೋಡೆ ಮಾಡಿದ ಪ್ರಕರಣ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ತಿರುವೈಯಲ್ಲಿ ಈ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮುರುಗನ್, ರಾಜೇಂದ್ರನ್ ಎಂದು ಗುರುತಿಸಲಾಗಿದೆ. ಇನ್ನೊಬ್ಬನ ಮಾಹಿತಿ ಲಭ್ಯವಾಗಿಲ್ಲ.
ಮುಂಬೈಯ ಧಾರಾವಿಯಲ್ಲಿ 10 ಮಂದಿಯ ಖತರ್ನಾಕ್ ಗ್ಯಾಂಗ್ ಬ್ಯಾಂಕ್ ದರೋಡೆಗೆ ಪ್ಲಾನ್ ಹಾಕಿತ್ತು. ಈ ಗ್ಯಾಂಗ್ ನಿಂದ ಇಬ್ಬರನ್ನು ಹೊರಗಿಡಲಾಗಿತ್ತು. ಈ ಹೊರಗಿಟ್ಟ ಇಬ್ಬರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಮಾಹಿತಿಯಂತೆ ಮುಂಬೈ ಪೊಲೀಸರು ಅವರ ಮನೆಯ ಮೇಲೆ ನಿಗಾ ಇಟ್ಟಿದ್ದರು. ಈ ನಡುವೆ ದರೋಡೆಕೋರರಲ್ಲಿ ಒಬ್ಬನಾದ ಮುರುಗನ್ ಮಂಗಳೂರಿನ ಕೋಟೆಕಾರಿಗೆ ಬಂದು ಕೋಟೆಕಾರು ಸಹಕಾರಿ ಸಂಘದಿಂದ ನಗ ಮತ್ತು ನಗದು ದೋಚುವ ಪ್ಲಾನ್ ಹಾಕಿದ್ದ. ಈ ಪ್ಲಾನ್ ನಂತೆ ದರೋಡೆ ನಡೆದಿದೆ. ಈ ಬಗ್ಗೆ ಮಂಗಳೂರು ಪೊಲೀಸರಿಗೆ ಮುಂಬೈ ಪೊಲೀಸರು ಮಾಹಿತಿ ನೀಡಿದ್ದರು. ಮುಂಬೈ ಪೊಲೀಸರು ನೀಡಿದ ಸುಳಿವಿನ ಆಧಾರದಲ್ಲಿ ಮಂಗಳೂರು ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ದರೋಡೆಕೋರರು ಸಹಕಾರಿ ಸಂಘ ಲೂಟಿ ಮಾಡಿದ ಬಳಿಕ ಕೇರಳ ಮಾರ್ಗವಾಗಿ ಫಿಯೆಟ್ ಕಾರಿನಲ್ಲಿ ಹಣ ಮತ್ತು ಚಿನ್ನದ ಗೋಣಿಯನ್ನು ಒಯ್ದಿದ್ದರು. ಫಿಯೆಟ್ ಕಾರಿನಲ್ಲೇ ಸುಮಾರು 700 ಕಿಮೀ. ಪ್ರಯಾಣ ನಡೆಸಿದ್ಸರು ಎಂಬ ಮಾಹಿತಿ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು