10:35 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಕೋಟೆಕರ್ ಸಹಕಾರಿ ಸಂಘ ದರೋಡೆ: ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಮುಖ್ಯಮಂತ್ರಿ ತುರ್ತು ಸಭೆ; ಆರೋಪಿಗಳ ಶೀಘ್ರ ಬಂಧನಕ್ಕೆ ಖಡಕ್ ಸೂಚನೆ

17/01/2025, 18:03

*ತಪ್ಪಿಸಿಕೊಂಡ ಆರೋಪಿಗಳು: ಸಿ.ಎಂ ಗರಂ*

*ಎಲ್ಲಾ ಟೋಲ್ ಗಳಲ್ಲಿ ತಪಾಸಣೆ: ಕೇರಳ ಗಡಿಯಲ್ಲಿನ ಸಿಸಿ ಕ್ಯಾಮರಾಗಳ ಪರಿಶೀಲನೆಗೆ ಸೂಚನೆ*

ಮಂಗಳೂರು(reporterkarnataka.com): ಕೋಟೆಕರ್ ವ್ಯವಸಾಯ ಸೇವಾ ಸಹಕಾರಿ ಸಂಘ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು.
ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪಶ್ಚಿಮ ರೇಂಜ್ ನ ಐಜಿ ಅಮಿತ್, ಪೊಲೀಸ್ ಆಯುಕ್ತ ಸಿಂಗ್, ಅನುಪಮ್ ಅಗರವಾಲ್, ಎಸ್.ಪಿ ಯತೀಶ್ , ಡಿವೈಎಸ್ ಪಿ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಘಟನೆಯ ಕುರಿತಂತೆ ಸಮಗ್ರ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ನೀವೆಲ್ಲಾ ಇದ್ದು ಯಾಕೆ ಹೀಗಾಯ್ತು? ಆರೋಪಿಗಳು ಸಲೀಸಾಗಿ ತಪ್ಪಿಸಿಕೊಂಡು ಹೋಗಿದ್ದು ಹೇಗೆ ? ಎಷ್ಟು ಟೋಲ್ ಗಳನ್ನು ದಾಟಿ ಹೋಗಿದ್ದಾರೆ. ನೀವು ಟೋಲ್ ಗಳನ್ನು‌ ಏಕೆ ಟೈಟ್ ಮಾಡಲಿಲ್ಲ ಎಂದು ಗರಂ ಆಗಿ ಪ್ರಶ್ನಿಸಿದರು.
ಸಹಕಾರಿ ಬ್ಯಾಂಕ್ ನಲ್ಲಿ ಭದ್ರತಾ ಸಿಬ್ಬಂದಿ ಇರಲಿಲ್ಲ. ಐದಾರು ಮಂದಿ ಮಾತ್ರ ಬ್ಯಾಂಕ್ ಸಿಬ್ಬಂದಿ ಇದ್ದರು. ಆರೋಪಿಗಳು ಕನ್ನಡ ಮತ್ತು ಹಿಂದಿಯಲ್ಲಿ ಮಾತಾಡಿರುವುದು ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.‌
ಎಲ್ಲಾ ಟೋಲ್ ಗಳಲ್ಲೂ ಬಿಗಿ ತಪಾಸಣೆ ನಡೆಸಬೇಕು. ನಾಲ್ಕು ಜಿಲ್ಲೆಗಳ ವ್ಯಾಪ್ತಿಯಲ್ಲಿ ನಾಕಾಬಂಧಿ ಹಾಕಿ ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಪ್ಪಿಸಿ ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು