8:00 PM Friday19 - September 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ

ಇತ್ತೀಚಿನ ಸುದ್ದಿ

ಕೋಟೆಕಾರು ಸಹಕಾರಿ ಸಂಘ ಶಾಖೆಗೆ ಹಾಡಹಗಲೇ ನುಗ್ಗಿದ ಮುಸುಕುಧಾರಿ ತಂಡ: 10 ಕೋಟಿಗೂ ಅಧಿಕ ಮೌಲ್ಯದ ನಗ, ನಗದು ಲೂಟಿ

17/01/2025, 17:13

ಮಂಗಳೂರು(reporterkarnataka.com): ಬೀದರ್ ಘಟನೆ ಇನ್ನೂ ಹಸಿರಾಗಿರುವಾಗಲೇ
ಉಳ್ಳಾಲದ ಕೆ.ಸಿ. ರೋಡ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಗೆ ಹಾಡಹಗಲೇ ನುಗ್ಗಿದ ತಂಡವೊಂದು ಬಂದೂಕು ಮತ್ತು ತಲವಾರು ತೋರಿಸಿ ಸುಮಾರು 10 ಕೋಟಿ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿದ್ದಾರೆ.


5 ಮಂದಿಯ ತಂಡ ಮಾಸ್ಕ್ ಧರಿಸಿ ಆಗಮಿಸಿದ್ದರು. ಫಿಯೆಟ್ ಕಾರಿನಲ್ಲಿ ಬಂದ ದರೋಡೆಕೋರರು ಗನ್ ಮತ್ತು ತಲವಾರು ತೋರಿಸಿ ಸಹಕಾರಿ ಸಂಘದ ಸಿಬ್ಬಂದಿಗಳನ್ನು ಬೆದರಿಸಿ ನಗದು ಮತ್ತು ಚಿನ್ನಾಭರಣವನ್ನು ಗೋಣಿಯಲ್ಲಿ ತುಂಬಿಸಿ ಪರಾರಿಯಾಗಿದ್ದಾರೆ. ದರೋಡೆಕೋರರು ಮಂಗಳೂರಿನತ್ತ ಪರಾರಿಯಾಗಿದ್ದಾರೆ. ಕೋಟೆಕಾರು ಸಹಕಾರಿ ಸಂಘದಲ್ಲಿ ಈ ಹಿಂದೆಯೂ ಕಳ್ಳತನ ನಡೆದಿತ್ತು ಎನ್ನಲಾಗಿದೆ.
ಸ್ಥಳಕ್ಕೆ ವಿಧಾನಸಭೆ ಸ್ಪೀಕರ್ ಹಾಗೂ ಸ್ಥಳೀಯ ಶಾಸಕ ಯು.ಟಿ. ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು