1:43 AM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಕೋಟೆಕಾರು ಸಹಕಾರಿ ಸಂಘ ಶಾಖೆಗೆ ಹಾಡಹಗಲೇ ನುಗ್ಗಿದ ಮುಸುಕುಧಾರಿ ತಂಡ: 10 ಕೋಟಿಗೂ ಅಧಿಕ ಮೌಲ್ಯದ ನಗ, ನಗದು ಲೂಟಿ

17/01/2025, 17:13

ಮಂಗಳೂರು(reporterkarnataka.com): ಬೀದರ್ ಘಟನೆ ಇನ್ನೂ ಹಸಿರಾಗಿರುವಾಗಲೇ
ಉಳ್ಳಾಲದ ಕೆ.ಸಿ. ರೋಡ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಗೆ ಹಾಡಹಗಲೇ ನುಗ್ಗಿದ ತಂಡವೊಂದು ಬಂದೂಕು ಮತ್ತು ತಲವಾರು ತೋರಿಸಿ ಸುಮಾರು 10 ಕೋಟಿ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿದ್ದಾರೆ.


5 ಮಂದಿಯ ತಂಡ ಮಾಸ್ಕ್ ಧರಿಸಿ ಆಗಮಿಸಿದ್ದರು. ಫಿಯೆಟ್ ಕಾರಿನಲ್ಲಿ ಬಂದ ದರೋಡೆಕೋರರು ಗನ್ ಮತ್ತು ತಲವಾರು ತೋರಿಸಿ ಸಹಕಾರಿ ಸಂಘದ ಸಿಬ್ಬಂದಿಗಳನ್ನು ಬೆದರಿಸಿ ನಗದು ಮತ್ತು ಚಿನ್ನಾಭರಣವನ್ನು ಗೋಣಿಯಲ್ಲಿ ತುಂಬಿಸಿ ಪರಾರಿಯಾಗಿದ್ದಾರೆ. ದರೋಡೆಕೋರರು ಮಂಗಳೂರಿನತ್ತ ಪರಾರಿಯಾಗಿದ್ದಾರೆ. ಕೋಟೆಕಾರು ಸಹಕಾರಿ ಸಂಘದಲ್ಲಿ ಈ ಹಿಂದೆಯೂ ಕಳ್ಳತನ ನಡೆದಿತ್ತು ಎನ್ನಲಾಗಿದೆ.
ಸ್ಥಳಕ್ಕೆ ವಿಧಾನಸಭೆ ಸ್ಪೀಕರ್ ಹಾಗೂ ಸ್ಥಳೀಯ ಶಾಸಕ ಯು.ಟಿ. ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು