2:35 AM Saturday4 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಕೋಟೆಕಾರು ಸಹಕಾರಿ ಸಂಘ ಶಾಖೆಗೆ ಹಾಡಹಗಲೇ ನುಗ್ಗಿದ ಮುಸುಕುಧಾರಿ ತಂಡ: 10 ಕೋಟಿಗೂ ಅಧಿಕ ಮೌಲ್ಯದ ನಗ, ನಗದು ಲೂಟಿ

17/01/2025, 17:13

ಮಂಗಳೂರು(reporterkarnataka.com): ಬೀದರ್ ಘಟನೆ ಇನ್ನೂ ಹಸಿರಾಗಿರುವಾಗಲೇ
ಉಳ್ಳಾಲದ ಕೆ.ಸಿ. ರೋಡ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಗೆ ಹಾಡಹಗಲೇ ನುಗ್ಗಿದ ತಂಡವೊಂದು ಬಂದೂಕು ಮತ್ತು ತಲವಾರು ತೋರಿಸಿ ಸುಮಾರು 10 ಕೋಟಿ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿದ್ದಾರೆ.


5 ಮಂದಿಯ ತಂಡ ಮಾಸ್ಕ್ ಧರಿಸಿ ಆಗಮಿಸಿದ್ದರು. ಫಿಯೆಟ್ ಕಾರಿನಲ್ಲಿ ಬಂದ ದರೋಡೆಕೋರರು ಗನ್ ಮತ್ತು ತಲವಾರು ತೋರಿಸಿ ಸಹಕಾರಿ ಸಂಘದ ಸಿಬ್ಬಂದಿಗಳನ್ನು ಬೆದರಿಸಿ ನಗದು ಮತ್ತು ಚಿನ್ನಾಭರಣವನ್ನು ಗೋಣಿಯಲ್ಲಿ ತುಂಬಿಸಿ ಪರಾರಿಯಾಗಿದ್ದಾರೆ. ದರೋಡೆಕೋರರು ಮಂಗಳೂರಿನತ್ತ ಪರಾರಿಯಾಗಿದ್ದಾರೆ. ಕೋಟೆಕಾರು ಸಹಕಾರಿ ಸಂಘದಲ್ಲಿ ಈ ಹಿಂದೆಯೂ ಕಳ್ಳತನ ನಡೆದಿತ್ತು ಎನ್ನಲಾಗಿದೆ.
ಸ್ಥಳಕ್ಕೆ ವಿಧಾನಸಭೆ ಸ್ಪೀಕರ್ ಹಾಗೂ ಸ್ಥಳೀಯ ಶಾಸಕ ಯು.ಟಿ. ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು