3:07 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕೋಟೇಶ್ವರ: ಇಬ್ಬರು ಅಂತರ್ ರಾಜ್ಯ ಮನೆಗಳ್ಳರ ಬಂಧನ: 16 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

07/01/2023, 19:55

ಕೋಟೇಶ್ವರ(reporterkarnataka.com): ಕೋಟೇಶ್ವರದಲ್ಲಿ ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಕುಂದಾಪುರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಕಾಸರಗೋಡು ಹೊಸದುರ್ಗಿ ಪೆರಿಯಾಟಡುಕಂ ನಿವಾಸಿ ಹಾಸಿಮ್ ಎ. ಎಚ್. (42) ಮತ್ತು ಕುಂಬಳೆ ಮಂಜೇಶ್ವರ ನಿವಾಸಿ ಅಬೂಬಕ್ಕರ್ ಸಿದ್ದೀಕ್ (48) ಎಂದು ಗುರುತಿಸಲಾಗಿದೆ.

2022 ಸಪ್ಟೆಂಬರ್ 17 ರಂದು ರಾತ್ರಿ ವೇಳೆಯಲ್ಲಿ ಕುಂದಾಪುರ ತಾಲೂಕು ಕೋಟೆಶ್ವರ ಗ್ರಾಮದ ಕಾಮತ್ ಪೆಟ್ರೋಲ್ ಹಂಪ್ ಎದುರಿನ ಬೊಬ್ಬರ್ಯ ದೇವಸ್ಥಾನ ಬಳಿ ಇರುವ ಪ್ರಸನ್ನ ನಾರಾಯಣ ಆಚಾರ್ಯ ಅವರ ಮನೆಯ ಎದುರಿನ ಬಾಗಿಲಿನ ಬೀಗವನ್ನು ಮುರಿದು, ಚಿನ್ನಾಭರಣಗಳನ್ನು ಹಾಗೂ ನಗದು ಹಣವು ಕಳವಾದ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತಂಡ ರಚಿಸಿ ತನಿಖೆಗೆ ಇಳಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ವಿಚಾರಣೆ ವೇಳೆ ಆರೋಪಿಗಳು ಜಿಲ್ಲೆಯ ಉಡುಪಿ ನಗರ ಪೊಲೀಸ್ ಠಾಣೆ, ಮಲ್ಪೆ ಪೊಲೀಸ್ ಠಾಣೆ, ಕುಂದಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಕಳ್ಳತನ ನಡೆಸಿ ಕಳವು ಮಾಡಿರುವ ಬಗ್ಗೆ ಬಾಯಿಬಿಟ್ಟಿದ್ದಾರೆ‌. ಚಿನ್ನಾಭರಣಗಳನ್ನು ಕೇರಳ ಮಂಜೇಶ್ವರ ತಾಲೂಕಿನ ನೀರ್ಚಾಲ್ ಕಾಳಿಕಾಂಬ ಜುವೆಲ್ಸರ್ಸ್ ನಲ್ಲಿ ಮಾರಾಟ ಮಾಡಿದ್ದು, ಅಲ್ಲಿಂದ 15 ಲಕ್ಷ ಮೌಲ್ಯದ ಒಟ್ಟು 300 ಗ್ರಾಂ ಚಿನ್ನ ಹಾಗೂ 1 ಲಕ್ಷ ಮೌಲ್ಯದ ಒಟ್ಟು 1481 ಗ್ರಾಂ ಬೆಳ್ಳಿ ಸೇರಿ ಒಟ್ಟು ಮೌಲ್ಯ 16 ಲಕ್ಷದ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು