12:38 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿ ಹಬ್ಬ ಸಂಭ್ರಮ: ರಥೋತ್ಸವಕ್ಕೆ ಸಾಕ್ಷಿಯಾದ ಸಹಸ್ರ ಸಹಸ್ರ ಭಕ್ತರು

19/11/2021, 22:18

ಕುಂದಾಪುರ(reporterkarnataka.com): ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿ ಹಬ್ಬ ಸಂಭ್ರಮದಿಂದ ಶುಕ್ರವಾರ ನಡೆಯಿತು.

ರಥೋತ್ಸವದ ಅಂಗವಾಗಿ ನ.12ರಿಂದಲೇ ಧಾರ್ಮಿಕ ವಿಧಿವಿಧಾನಗಳು ಆರಂಭಗೊಂಡಿದ್ದವು. ಶುಕ್ರವಾರ ಬೆಳಿಗ್ಗೆ 11-50ಕ್ಕೆ ಮಕರ ಲಗ್ನ ಸುಮುಹೂರ್ತದಲ್ಲಿ ಶ್ರೀ ಮನ್ಮಹಾರಥೋತ್ಸವ ನಡೆಯಿತು.

ಕೋಟೇಶ್ವರ ರಥೋತ್ಸವದ ಸಂದರ್ಭದಲ್ಲಿ ಗರುಡ ಪ್ರದಕ್ಷಣೆ ಸಹಜ ಪ್ರಕ್ರಿಯೆ. ಎಷ್ಟೋ ಜನ ಭಕ್ತರು ಗರುಡ ಬರುವುದನ್ನೇ ಕಾದಿರುತ್ತಾರೆ. ಇವತ್ತು ಕೂಡಾ ರಥಕ್ಕೆ ಗರುಡ ಪ್ರದಕ್ಷಣೆ ಬಂದಿರುವ ದೃಶ್ಯವನ್ನು ನೋಡಿ ಭಕ್ತರು ಪುಳಕಿತರಾದರು.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಎಂ.ಪ್ರಭಾಕರ ಶೆಟ್ಟಿ, ದೇವಳದ ತಂತ್ರಿಗಳಾಗಿ ಪ್ರಸನ್ನ ಕುಮಾರ್ ಐತಾಳ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಗಣೇಶ್ ಗೌಡ, ಸಮಿತಿ ಸದಸ್ಯರಾಗಿ ಎಸ್.ರಾಘವೇಂದ್ರ ರಾವ್ ನೇರಂಬಳ್ಳಿ, ಸುರೇಶ್ ಶೇರೆಗಾರ್ ಬೀಜಾಡಿ, ಚಂದ್ರಿಕಾ ಧನ್ಯ ಕೋಟೇಶ್ವರ, ಶಾರದಾ ಮೂಡುಗೋಪಾಡಿ, ಮಂಜುನಾಥ ಆಚಾರ್ಯ, ಭಾರತಿ, ಹಾಗೂ ಅರ್ಚಕರು, ಸಿಬ್ಬಂದಿ ವರ್ಗ ಹಾಗು ಸಮಸ್ತ ಕೋಟೇಶ್ವರ ಗ್ರಾಮಸ್ಥರು, ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.


ಕೊಡಿ ಹಬ್ಬ: ಕೋಟೇಶ್ವರದ ಸುತ್ತುಮುತ್ತಲಿನ ನವವಿವಾಹಿತರು ಬದುಕಿನ ಕುಡಿಯೊಡೆವ ಕ್ಷೇತ್ರವೆಂದೇ ನಂಬುಗೆ ತಳೆದವರಾಗಿ ಕೋಟಿತೀರ್ಥದಲ್ಲಿ ಸ್ನಾನಮಾಡಿ ದೇವರ ದರ್ಶನ ಪಡೆದು ಕಬ್ಬಿನ ಕೊಡಿಯನ್ನು ಒಟ್ಟಿಗೆ ಕೊಂಡೊಯ್ಯುತ್ತಾರೆ.


ಸುತ್ತಕ್ಕಿ ಸೇವೆ: ಸುಮಾರು 5 ಎಕರೆ ವಿಸ್ತೀರ್ಣದ ವಿಶಾಲವಾದ ಈ ಕೆರೆಗೆ ಸುತ್ತಕ್ಕಿ ತಳಿದರೆ ತಮ್ಮ ಇಷ್ಟಾರ್ಥ ಈಡೇರುತ್ತದೆ ಎಂಬ ನಂಬಿಕೆಯಿಂದ ಹಬ್ಬದ ದಿನ ಬೆಳಿಗ್ಗೆ 3 ಗಂಟೆಯಿಂದಲೇ ದೂರ ದೂರದ ಹರಕೆ ಹೊತ್ತ ಭಕ್ತಾಭಿಮಾನಿಗಳು ಕೆರೆಯಲ್ಲಿ ತೀರ್ಥ ಸ್ನಾನ ಮಾಡಿ ಮನೆಯಲ್ಲಿಯೇ ಬೆಳೆದ ಬತ್ತದ ಅಕ್ಕಿಯನ್ನು ಈ ಕೆರೆಯ ಸುತ್ತ ತಳಿಯುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು