1:04 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಬಣಕಲ್ ಪೊಲೀಸ್ ಠಾಣೆ ವತಿಯಿಂದ ಸಾರ್ವಜನಿಕರ ಜತೆ ಜನಸಂಪರ್ಕ ಸಭೆ

28/04/2025, 21:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಪಟ್ಟಣದ ತರುವೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬಣಕಲ್ ಪೊಲೀಸ್ ಠಾಣೆಯ ವತಿಯಿಂದ ಸಾರ್ವಜನಿಕರ ಜೊತೆ ಜನಸಂಪರ್ಕ ಸಭೆ ನಡೆಯಿತು.
ಸಭೆಯಲ್ಲಿ ಮೂಡಿಗೆರೆ ವೃತ್ತ ನಿರೀಕ್ಷಕ ರಾಜಶೇಖರ್ ಅವರು ಮಾತನಾಡುತ್ತಾ, “ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು. ಯಾವುದೇ ಸಮಸ್ಯೆ ಎದುರಾದರೆ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕು,” ಎಂದರು. ಜೊತೆಗೆ, ಹೊಸದಾಗಿ ಜಾರಿಗೆ ಬಂದಿರುವ ಬಿಎನ್ಎಸ್ (ಭದ್ರತಾ ಕ್ರಮ) ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಅಪರಾಧ ತಡೆಯಲು ಸಾರ್ವಜನಿಕರ ಸಹಕಾರ ಅತ್ಯವಶ್ಯಕ ಎಂದು ಹೇಳಿದರು.
ಬಣಕಲ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರೇಣುಕಾ ಅವರು ಮಾತನಾಡಿ, ಮಹಿಳಾ ಮತ್ತು ಮಕ್ಕಳ ರಕ್ಷಣೆ ಕುರಿತು ಜಾಗೃತಿ ಮೂಡಿಸಿದರು. ಸುತ್ತಮುತ್ತಲ ಶಾಲಾ ಕಟ್ಟಡಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ಶಾಲಾ ಕ್ಷೇಮಾಭಿವೃದ್ಧಿ ಸಮಿತಿಗೆ ಸೂಚನೆ ನೀಡಿದರು.
ಸಾಮಾಜಿಕ ಜಾಲತಾಣಗಳ ದುರುಪಯೋಗ ಕುರಿತು ಎಚ್ಚರಿಕೆ ನೀಡುತ್ತಾ, “ಸಮಾಜಿಕ ಏಕತೆಯನ್ನು ಹಾಳುಮಾಡುವ ಸಂದೇಶಗಳನ್ನು ಹರಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ” ಎಂದರು. ಮಕ್ಕಳ ರಕ್ಷಣೆ ಸಂಬಂಧಿತ ಪೋಕ್ಸೋ ಕಾಯ್ದೆಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.
“ತೋಟಗಳಲ್ಲಿ ಕೆಲಸ ಮಾಡುತ್ತಿರುವ ಹೊರ ರಾಜ್ಯದ ಕಾರ್ಮಿಕರ ಬಗ್ಗೆ ನಿಖರ ಮಾಹಿತಿ ಇಟ್ಟುಕೊಳ್ಳಬೇಕು” ಎಂದು ತೋಟದ ಮಾಲೀಕರಿಗೆ ಸಲಹೆ ನೀಡಿದರು.
“ಚಿಕ್ಕಮಗಳೂರು-ಮೂಡಿಗೆರೆ ಭಾಗ ಪ್ರವಾಸಿಗರ ನಾಡಾಗಿದ್ದು, ಹೆಚ್ಚಿನ ಪ್ರವಾಸಿಗರು ಕೊಟ್ಟಿಗೆಹಾರಕ್ಕೆ ಬಂದು ಹೋಟೆಲ್‌ಗಳಲ್ಲಿ ಆಹಾರ ಪದಾರ್ಥ ಗಳನ್ನು ತಿನ್ನುತ್ತಾರೆ, ಹೀಗಾಗಿ ಆಹಾರದ ಗುಣಮಟ್ಟ ಕಾಪಾಡಿ, ಅಂಗಡಿ–ಹೋಟೆಲ್‌ಗಳ ಮುಂದೆ ಸ್ವಚ್ಛತೆ ಕಾಪಾಡಿ, ಕಸ ಹಾಕದಂತೆ ಜಾಗರೂಕರಾಗಿ ವರ್ತಿಸಬೇಕು ಎಂದರು.
ಸಭೆಯಲ್ಲಿ ಪಾಲ್ಗೊಂಡಿದ್ದ ತರುವೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಶೀಲಾ, ಸದಸ್ಯರುಗಳಾದ ಸತೀಶ್ ಗೌಡ, ಸ್ಮಿತಾ, ವರ್ತಕರ ಸಂಘದ ಅಧ್ಯಕ್ಷ ಟಿ.ಎಮ್. ಗಜೇಂದ್ರ ಗೌಡ, ಸಮಾಜ ಸೇವಕ ಸಂಜಯ್ ಗೌಡ, ಆಟೋ ಸಂಘದ ಅಧ್ಯಕ್ಷ ರಮೇಶ್, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಕಾರು ಮತ್ತು ಆಟೋ ಮಾಲೀಕರು ಹಾಗೂ ಚಾಲಕರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು