8:35 AM Saturday17 - January 2026
ಬ್ರೇಕಿಂಗ್ ನ್ಯೂಸ್
ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಬಣಕಲ್ ಪೊಲೀಸ್ ಠಾಣೆ ವತಿಯಿಂದ ಸಾರ್ವಜನಿಕರ ಜತೆ ಜನಸಂಪರ್ಕ ಸಭೆ

28/04/2025, 21:06

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಪಟ್ಟಣದ ತರುವೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಬಣಕಲ್ ಪೊಲೀಸ್ ಠಾಣೆಯ ವತಿಯಿಂದ ಸಾರ್ವಜನಿಕರ ಜೊತೆ ಜನಸಂಪರ್ಕ ಸಭೆ ನಡೆಯಿತು.
ಸಭೆಯಲ್ಲಿ ಮೂಡಿಗೆರೆ ವೃತ್ತ ನಿರೀಕ್ಷಕ ರಾಜಶೇಖರ್ ಅವರು ಮಾತನಾಡುತ್ತಾ, “ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು. ಯಾವುದೇ ಸಮಸ್ಯೆ ಎದುರಾದರೆ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕು,” ಎಂದರು. ಜೊತೆಗೆ, ಹೊಸದಾಗಿ ಜಾರಿಗೆ ಬಂದಿರುವ ಬಿಎನ್ಎಸ್ (ಭದ್ರತಾ ಕ್ರಮ) ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಅಪರಾಧ ತಡೆಯಲು ಸಾರ್ವಜನಿಕರ ಸಹಕಾರ ಅತ್ಯವಶ್ಯಕ ಎಂದು ಹೇಳಿದರು.
ಬಣಕಲ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ರೇಣುಕಾ ಅವರು ಮಾತನಾಡಿ, ಮಹಿಳಾ ಮತ್ತು ಮಕ್ಕಳ ರಕ್ಷಣೆ ಕುರಿತು ಜಾಗೃತಿ ಮೂಡಿಸಿದರು. ಸುತ್ತಮುತ್ತಲ ಶಾಲಾ ಕಟ್ಟಡಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ಶಾಲಾ ಕ್ಷೇಮಾಭಿವೃದ್ಧಿ ಸಮಿತಿಗೆ ಸೂಚನೆ ನೀಡಿದರು.
ಸಾಮಾಜಿಕ ಜಾಲತಾಣಗಳ ದುರುಪಯೋಗ ಕುರಿತು ಎಚ್ಚರಿಕೆ ನೀಡುತ್ತಾ, “ಸಮಾಜಿಕ ಏಕತೆಯನ್ನು ಹಾಳುಮಾಡುವ ಸಂದೇಶಗಳನ್ನು ಹರಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ” ಎಂದರು. ಮಕ್ಕಳ ರಕ್ಷಣೆ ಸಂಬಂಧಿತ ಪೋಕ್ಸೋ ಕಾಯ್ದೆಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.
“ತೋಟಗಳಲ್ಲಿ ಕೆಲಸ ಮಾಡುತ್ತಿರುವ ಹೊರ ರಾಜ್ಯದ ಕಾರ್ಮಿಕರ ಬಗ್ಗೆ ನಿಖರ ಮಾಹಿತಿ ಇಟ್ಟುಕೊಳ್ಳಬೇಕು” ಎಂದು ತೋಟದ ಮಾಲೀಕರಿಗೆ ಸಲಹೆ ನೀಡಿದರು.
“ಚಿಕ್ಕಮಗಳೂರು-ಮೂಡಿಗೆರೆ ಭಾಗ ಪ್ರವಾಸಿಗರ ನಾಡಾಗಿದ್ದು, ಹೆಚ್ಚಿನ ಪ್ರವಾಸಿಗರು ಕೊಟ್ಟಿಗೆಹಾರಕ್ಕೆ ಬಂದು ಹೋಟೆಲ್‌ಗಳಲ್ಲಿ ಆಹಾರ ಪದಾರ್ಥ ಗಳನ್ನು ತಿನ್ನುತ್ತಾರೆ, ಹೀಗಾಗಿ ಆಹಾರದ ಗುಣಮಟ್ಟ ಕಾಪಾಡಿ, ಅಂಗಡಿ–ಹೋಟೆಲ್‌ಗಳ ಮುಂದೆ ಸ್ವಚ್ಛತೆ ಕಾಪಾಡಿ, ಕಸ ಹಾಕದಂತೆ ಜಾಗರೂಕರಾಗಿ ವರ್ತಿಸಬೇಕು ಎಂದರು.
ಸಭೆಯಲ್ಲಿ ಪಾಲ್ಗೊಂಡಿದ್ದ ತರುವೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಶೀಲಾ, ಸದಸ್ಯರುಗಳಾದ ಸತೀಶ್ ಗೌಡ, ಸ್ಮಿತಾ, ವರ್ತಕರ ಸಂಘದ ಅಧ್ಯಕ್ಷ ಟಿ.ಎಮ್. ಗಜೇಂದ್ರ ಗೌಡ, ಸಮಾಜ ಸೇವಕ ಸಂಜಯ್ ಗೌಡ, ಆಟೋ ಸಂಘದ ಅಧ್ಯಕ್ಷ ರಮೇಶ್, ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಕಾರು ಮತ್ತು ಆಟೋ ಮಾಲೀಕರು ಹಾಗೂ ಚಾಲಕರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು