4:02 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕೊಟ್ಟಾರಚೌಕಿಯ ಮಾಲಾಡಿ ರಸ್ತೆ ರಾಜಕಾಲುವೆ ತಡೆಗೋಡೆಗೆ 20 ಕೋಟಿ ವಿಶೇಷ ಪ್ಯಾಕೇಜ್: ಶಾಸಕ ಡಾ. ಭರತ್ ಶೆಟ್ಟಿ

31/12/2022, 23:51

ಮಂಗಳೂರು(reporterkarnataka.com); ಸಣ್ಣ ನೀರಾವರಿಯ 20 ಕೋಟಿ ರೂ. ವಿಶೇಷ ಪ್ಯಾಕೇಜಿನಲ್ಲಿ ಬಂಗ್ರಕೂಳೂರು 16ನೇ ವಾರ್ಡ್ ವ್ಯಾಪ್ತಿಯ ಕೊಟ್ಟಾರಚೌಕಿಯ ಮಾಲಾಡಿ ರಸ್ತೆ ರಾಜಕಾಲುವೆ ತಡೆಗೋಡೆಗೆ 1.30 ಕೋಟಿ ರೂ.ಬಿಡುಗಡೆ ಮಾಡಲಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ. ಹೇಳಿದರು.

ಅವರು ಇಲ್ಲಿನ ರಾಜಕಾಲುವೆಗೆ ತಡೆಗೋಡೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ರಾಜ್ಯದ ನಗರಾಭಿವೃದ್ಧಿ ಸಚಿವರಾದ ಬೈರತಿ ಬಸವರಾಜ್‌ ಅವರು ಕೃತಕ ನೆರೆ ಭೀತಿ ನಿವಾರಿಸುವ ಸಲುವಾಗಿ , ಚರಂಡಿ, ಕಾಲುವೆ, ತಡೆಗೋಡೆ, ರಸ್ತೆ ಮತ್ತಿತರ ಕಾಮಗಾರಿಗಾಗಿ 23 ಕೋ.ರೂ ವಿಶೇಷ ಅನುದಾನ ನೀಡಿದ್ದು ಅಗತ್ಯವಿದ್ದೆಡೆ ಕಾಮಗಾರಿ ನಡೆಸಲಾಗುವುದು.

ಕಳೆದ ಹಲವು ವರ್ಷಗಳಿಂದ ಇಲ್ಲಿ ಮಳೆಯ ಸಂದರ್ಭ ನೆರೆ ಅವರಿಸುತ್ತಿದ್ದು ಜನರ ಬೇಡಿಕೆಯಿತ್ತು. ಇದೀಗ ತಡೆಗೋಡೆ ಜತೆಗೆ ಇಲ್ಲಿನ ತಗ್ಗಾದ ಕಾಲು ಸಂಕಗಳನ್ನು ತೆಗೆದು ಎತ್ತರಿಸಲಾಗುವುದು ಎಂದರು.
ಒಳಭಾಗದ ರಸ್ತೆಗಳನ್ನು ಲೋಕೋಪಯೋಗಿ ಇಲಾಖೆ ಸೇರಿದಂತೆ ಅಂದಾಜು 1 ಕೋಟಿ ರೂ.ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುವುದು.
ಸ್ಥಳೀಯ ಮನಪಾ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್, ಬಿಜೆಪಿ ಪ್ರಮುಖರಾದ ಉಮೇಶ ಮಲರಾಯಸಾನ, ಜಯಪ್ರಕಾಶ್ ಕುಲಾಲ್, ರಾಜೇಶ್, ಸುರೇಶ್‌ ಭಂಡಾರಿ,ಕಿರಣ್ ಕೋಟ್ಯಾನ್, ಗೋಪಾಲ್ ಶೆಟ್ಟಿ ಗಣೇಶ್ ಶೆಟ್ಟಿ, ಪಕ್ಷದ ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು