5:12 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರದಲ್ಲಿ ಯೂನಿವರ್ಸಲ್  ಚೆಕ್‍ಪೋಸ್ಟ್ ಗೆ ಚಿಂತನೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

14/05/2022, 11:54

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರದಲ್ಲಿ ಯೂನಿವರ್ಸಲ್ ಚೆಕ್‍ಪೋಸ್ಟ್ ನಿರ್ಮಾಣಕ್ಕೆ ಚಿಂತನೆ ನಡೆಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹೇಳಿದರು.

ಕೊಟ್ಟಿಗೆಹಾರದ ಚೆಕ್‍ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಕೃಷಿ ಉತ್ಪನ್ನಗಳ ತನಿಖಾ ಠಾಣೆಯೂ ಎಲ್ಲವೂ ಒಂದೇಡೆ ಕಾರ್ಯ ನಿರ್ವಹಿಸುವಂತೆ ಯೂನಿವರ್ಸಲ್ ಚೆಕ್‍ಪೋಸ್ಟ್ ನಿರ್ಮಿಸಲು ಚಿಂತನೆ ನಡೆಸಲಾಗುವುದು. ಕೊಟ್ಟಿಗೆಹಾರದಲ್ಲಿ ಪೊಲೀಸ್ ಇಲಾಖೆ, ಜಿಲ್ಲಾಡಳಿತ ಹಾಗೂ ಸ್ಥಳೀಯ ವರ್ತಕರ ಸಹಕಾರದಿಂದ ಸಿಸಿ ಕ್ಯಾಮರಾ ಅಳವಡಿಸಲು ಉದ್ದೇಶಿಸಲಾಗಿದೆ. ಸ್ಥಳೀಯ ವರ್ತಕರ ಪಾಲುದಾರಿಕೆ ಇದ್ದರೆ ಸಿಸಿ ಕ್ಯಾಮರಾದ ಬಗ್ಗೆ ಮುತುವರ್ಜಿ ವಹಿಸಲು ಸಾಧ್ಯವಾಗುತ್ತದೆ ಎಂದರು.

ಚಾರ್ಮಾಡಿ ಘಾಟ್‍ನಲ್ಲಿ ಈಗಾಗಲೇ ಪೊಲೀಸ್ ಗಸ್ತು ವಾಹನ ಸಂಚರಿಸುತ್ತಿದ್ದು ಇದನ್ನು ಮತ್ತಷ್ಟು ಹೆಚ್ಚಿಸುವಂತೆ ವೃತ್ತ ನಿರೀಕ್ಷಕ ಸೋಮಶೇಖರ್ ಅವರಿಗೆ ಸೂಚಿಸಿದರು. ದರೋಡೆ ನಡೆದ ಕೇವಲ 10 ಗಂಟೆಯೊಳಗೆ ಆರೋಪಿಯನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಪ್ರಭು, ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಹರ್ಷಕುಮಾರ್, ತಾ.ಪಂ ಸಹಾಯಕ ನಿರ್ದೇಶಕರಾದ ಪ್ರಕಾಶ್, ನೌಕರರ ಸಂಘದ ಪ್ರತಿನಿಧಿ ಪದ್ಮರಾಜ್, ವೃತ್ತ ನಿರೀಕ್ಷಕ ಸೋಮಶೇಖರ್, ಬಣಕಲ್ ಠಾಣೆ ಪಿಎಸ್‍ಐ ಸತೀಶ್, ಅರಣ್ಯ ರಕ್ಷಕ ವಿಜಯಕುಮಾರ್, ಸಾಮಾಜಿಕ ಕಾರ್ಯಕರ್ತ ಸಂಜಯಗೌಡ ಕೊಟ್ಟಿಗೆಹಾರ, ದೇವೆಂದ್ರ ಮುಂತಾದವರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು