1:27 AM Tuesday16 - December 2025
ಬ್ರೇಕಿಂಗ್ ನ್ಯೂಸ್
1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರದ ಕೆ.ತಲಗೂರಿನಲ್ಲಿ 23.20 ಎಕರೆ ಸರಕಾರಿ ಜಾಗ ಒತ್ತುವರಿ ತೆರವು: ಅರಣ್ಯ ಇಲಾಖೆ ಕಾರ್ಯಾಚರಣೆ

14/08/2024, 19:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಾಳೂರು ಹೋಬಳಿಯ ಗಬ್ಗಲ್ ಸಮೀಪದ ಕೆ.ತಲಗೂರು ಗ್ರಾಮದಲ್ಲಿ ಸ.ನಂ 59ರಲ್ಲಿ (ಹಳೆ ಸ.ನಂ.48) 23.20 ಎಕರೆ ಆಲ್ದೂರು ಅರಣ್ಯ ವ್ಯಾಪ್ತಿಗೆ ಬರುವ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿರುವುದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಪೊಲೀಸರ ನೇತೃತ್ವದಲ್ಲಿ ತೆರವುಗೊಳಿಸಿದ್ದಾರೆ.
ಅರಣ್ಯ ಇಲಾಖೆಗೆ ಸೇರಿದ 23.20 ಎಕರೆ ಜಾಗದಲ್ಲಿ ತೋಟದ ಮಾಲೀಕರೊಬ್ಬರು ಒತ್ತುವರಿ ಮಾಡಿದ್ದು ಅದರಲ್ಲಿ ಕಾಫಿ ಬೆಳೆ,ಅಡಿಕೆ, ತೆಂಗು ಬೆಳೆಯಲಾಗಿತ್ತು. ಅದರಲ್ಲಿ ಸದ್ಯಕ್ಕೆ ಕಾಫಿ, ಅಡಿಕೆ ಬೆಳೆಯನ್ನು ಖುಲ್ಲಾಗೊಳಿಸಿ ಸುಮಾರು ಶೇ 65ರಷ್ಟು ಸರ್ಕಾರಿ ಜಾಗವನ್ನು ಆದೇಶದಂತೆ ತೆರವು ಗೊಳಿಸಲಾಯಿತು. ಶೇ 35 ಭಾಗದಷ್ಟು ಜಾಗವನ್ನು ಖುಲ್ಲಾಗೊಳಿಸಲು ಬಾಕಿ ಇದೆ ಎಂದು ಅರಣ್ಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಬುಧವಾರ ಬೆಳಿಗ್ಗೆ 5.30 ಗಂಟೆಯಿಂದ ಸಂಜೆ 3.30 ವರೆಗೆ ಅರಣ್ಯ ಇಲಾಖಾ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರ ಸಮಕ್ಷಮದಲ್ಲಿ ಶಾಂತಿಯುತವಾಗಿ ಸರ್ಕಾರಿ ಜಾಗವನ್ನು ತೆರವುಗೊಳಿಸಿ ವಶ ಪಡಿಸಲಾಯಿತು. ಮಾಲೀಕರಿಗೆ ನಾಲ್ಕು ವರ್ಷದ ಹಿಂದೆಯೇ ಈ ಬಗ್ಗೆ ನೊಟೀಸ್ ನೀಡಲಾಗಿತ್ತು. ಅದರಂತೆಯೇ ಜಾಗದಲ್ಲಿನ ಬೆಳೆ ತೆರವುಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಬಾಳೂರು ಸಬ್ ಇನ್ ಸ್ಪೆಕ್ಟರ್ ದಿಲೀಪ್ ಕುಮಾರ್, ಎಎಸೈ ಟಿ.ಕೆ. ಶಶಿ ಹಾಗೂ 25 ಮಂದಿ ಡಿ.ಆರ್.ಪೊಲೀಸರ ತಂಡ ಹಾಗೂ ಆಲ್ದೂರು ವಲಯ ಅರಣ್ಯ ಅಧಿಕಾರಿಗಳಾದ ಹರೀಶ್ ಕುಮಾರ್, ಚರಣ್ ಕುಮಾರ್, ಶಿವಕುಮಾರ್, ಉಪವಲಯ ಅರಣ್ಯಾಧಿಕಾರಿಗಳಾದ ನವೀನ್, ಗೌತಮ್, ಸಂದೀಪ್, ಚೇತನ್, ವಿಜಯ ಕುಮಾರ್, ಗಸ್ತು ಅರಣ್ಯ ಪಾಲಕರಾದ ಮೊಹಸೀನ್, ಕಿಶೋರ್, ನಾಗರಾಜ್, ಉಮೇಶ್, ಸುರೇಶ್, ಅರಣ್ಯ ವೀಕ್ಷಕ ಗಿರೀಶ್, ಸುಧೀರ್
ಮತ್ತಿತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು