12:02 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರದ ಕೆ.ತಲಗೂರಿನಲ್ಲಿ 23.20 ಎಕರೆ ಸರಕಾರಿ ಜಾಗ ಒತ್ತುವರಿ ತೆರವು: ಅರಣ್ಯ ಇಲಾಖೆ ಕಾರ್ಯಾಚರಣೆ

14/08/2024, 19:56

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಬಾಳೂರು ಹೋಬಳಿಯ ಗಬ್ಗಲ್ ಸಮೀಪದ ಕೆ.ತಲಗೂರು ಗ್ರಾಮದಲ್ಲಿ ಸ.ನಂ 59ರಲ್ಲಿ (ಹಳೆ ಸ.ನಂ.48) 23.20 ಎಕರೆ ಆಲ್ದೂರು ಅರಣ್ಯ ವ್ಯಾಪ್ತಿಗೆ ಬರುವ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿರುವುದನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಪೊಲೀಸರ ನೇತೃತ್ವದಲ್ಲಿ ತೆರವುಗೊಳಿಸಿದ್ದಾರೆ.
ಅರಣ್ಯ ಇಲಾಖೆಗೆ ಸೇರಿದ 23.20 ಎಕರೆ ಜಾಗದಲ್ಲಿ ತೋಟದ ಮಾಲೀಕರೊಬ್ಬರು ಒತ್ತುವರಿ ಮಾಡಿದ್ದು ಅದರಲ್ಲಿ ಕಾಫಿ ಬೆಳೆ,ಅಡಿಕೆ, ತೆಂಗು ಬೆಳೆಯಲಾಗಿತ್ತು. ಅದರಲ್ಲಿ ಸದ್ಯಕ್ಕೆ ಕಾಫಿ, ಅಡಿಕೆ ಬೆಳೆಯನ್ನು ಖುಲ್ಲಾಗೊಳಿಸಿ ಸುಮಾರು ಶೇ 65ರಷ್ಟು ಸರ್ಕಾರಿ ಜಾಗವನ್ನು ಆದೇಶದಂತೆ ತೆರವು ಗೊಳಿಸಲಾಯಿತು. ಶೇ 35 ಭಾಗದಷ್ಟು ಜಾಗವನ್ನು ಖುಲ್ಲಾಗೊಳಿಸಲು ಬಾಕಿ ಇದೆ ಎಂದು ಅರಣ್ಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಬುಧವಾರ ಬೆಳಿಗ್ಗೆ 5.30 ಗಂಟೆಯಿಂದ ಸಂಜೆ 3.30 ವರೆಗೆ ಅರಣ್ಯ ಇಲಾಖಾ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರ ಸಮಕ್ಷಮದಲ್ಲಿ ಶಾಂತಿಯುತವಾಗಿ ಸರ್ಕಾರಿ ಜಾಗವನ್ನು ತೆರವುಗೊಳಿಸಿ ವಶ ಪಡಿಸಲಾಯಿತು. ಮಾಲೀಕರಿಗೆ ನಾಲ್ಕು ವರ್ಷದ ಹಿಂದೆಯೇ ಈ ಬಗ್ಗೆ ನೊಟೀಸ್ ನೀಡಲಾಗಿತ್ತು. ಅದರಂತೆಯೇ ಜಾಗದಲ್ಲಿನ ಬೆಳೆ ತೆರವುಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಬಾಳೂರು ಸಬ್ ಇನ್ ಸ್ಪೆಕ್ಟರ್ ದಿಲೀಪ್ ಕುಮಾರ್, ಎಎಸೈ ಟಿ.ಕೆ. ಶಶಿ ಹಾಗೂ 25 ಮಂದಿ ಡಿ.ಆರ್.ಪೊಲೀಸರ ತಂಡ ಹಾಗೂ ಆಲ್ದೂರು ವಲಯ ಅರಣ್ಯ ಅಧಿಕಾರಿಗಳಾದ ಹರೀಶ್ ಕುಮಾರ್, ಚರಣ್ ಕುಮಾರ್, ಶಿವಕುಮಾರ್, ಉಪವಲಯ ಅರಣ್ಯಾಧಿಕಾರಿಗಳಾದ ನವೀನ್, ಗೌತಮ್, ಸಂದೀಪ್, ಚೇತನ್, ವಿಜಯ ಕುಮಾರ್, ಗಸ್ತು ಅರಣ್ಯ ಪಾಲಕರಾದ ಮೊಹಸೀನ್, ಕಿಶೋರ್, ನಾಗರಾಜ್, ಉಮೇಶ್, ಸುರೇಶ್, ಅರಣ್ಯ ವೀಕ್ಷಕ ಗಿರೀಶ್, ಸುಧೀರ್
ಮತ್ತಿತರರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು