11:06 AM Friday19 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ ಪೇಟೆಯಲ್ಲಿ ಬಿಡಾಡಿ ದನಗಳ ಹಾವಳಿ: ಕಡಿವಾಣಕ್ಕೆ ಸಾರ್ವಜನಿಕರ ಒತ್ತಾಯ

17/02/2022, 16:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿಲ್ಲುಪುರಂ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೊಟ್ಟಿಗೆಹಾರದಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ವಾಹನ ಸವಾರರು, ವರ್ತಕರು ಕಿರಿಕಿರಿ ಅನುಭವಿಸುವಂತಾಗಿದೆ.

ಇಲ್ಲಿನ ರಸ್ತೆಯಲ್ಲಿ 30ಕ್ಕೂ ಅಧಿಕ ಬಿಡಾಡಿ ದನಗಳು ರಸ್ತೆಯಲ್ಲಿ ಮಲಗಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಅತಿ ಹೆಚ್ಚು ಬಿಡಾಡಿ ದನಗಳು ಮಾಲೀಕರಿದ್ದರೂ ಅವುಗಳನ್ನು ಮೇಯಿಸಲು ಹೊಲಗಳಿಗೆ ಬಿಡದೇ ಅವುಗಳು ರಸ್ತೆ, ಬಸ್ ನಿಲ್ದಾಣ, ಅಂಗಡಿ ಬಾಗಿಲುಗಳ ಮುಂದೆ ಮಲಗಿ ಆಶ್ರಯ ಪಡೆಯುತ್ತಿವೆ. ಅಂಗಡಿ, ಬಸ್ ನಿಲ್ದಾಣದಲ್ಲಿ ಮಲಗಿ ಸಗಣಿ ಹಾಕಿ ಗಂಜಲವನ್ನು ಹಾಕಿ ಇಡೀ ಸ್ಥಳವನ್ನೇ ಕಲುಷಿತಗೊಳಿಸುತ್ತಿವೆ. 

ಕೊಟ್ಟಿಗೆಹಾರದ ಬಸ್ ನಿಲ್ದಾಣದಲ್ಲಂತೂ ದನಗಳ ಗಂಜಲದಿಂದ ಬಸ್ ನಿಲ್ದಾಣ ಗಲೀಜಾಗಿದೆ. ಅಂಗಡಿ-ಮುಂಗಟ್ಟುಗಳ ವರ್ತಕರಿಗೆ ಬೆಳಿಗ್ಗೆ ಸಗಣಿ, ಗಂಜಲ ಎತ್ತಿ ಸ್ವಚ್ಚಗೊಳಿಸುವುದೇ ಒಂದು ಕಾಯಕವಾಗಿದೆ. ಅಲ್ಲದೇ ವಾಹನಗಳು ವೇಗವಾಗಿ ಸಂಚಾರಿಸುವ ವೇಳೆ ರಸ್ತೆಯಲ್ಲಿ ಅತ್ತಿತ್ತ ಓಡಾಡಿ ಬೈಕು,ಕಾರು,ಬಸ್ಸುಗಳ ಮುಂದೆ ಬಂದು ಅಪಘಾತಗಳಿಗೂ ಎಡೆಮಾಡಿಕೊಡುತ್ತಿವೆ. ದ್ವಿಚಕ್ರ ಸವಾರರಂತೂ ಜೀವವನ್ನು ಕೈಯಲ್ಲೇ ಇಟ್ಟು ವಾಹನವನ್ನು ಚಲಾಯಿಸಬೇಕಿದೆ. ರಸ್ತೆಯಲ್ಲಿ ಓಡಾಡುವ ಬಿಡಾಡಿ ದನಗಳಿಗೆ ಪಶು ಇಲಾಖೆ ವತಿಯಿಂದ ವಿಮೆ ಮಾಡಿ ಕಿವಿಗೆ ಗುರುತು ಪಟ್ಟಿ ಕೂಡ ಹಾಕಿದ್ದು ಆ ಕಿವಿ ಪಟ್ಟಿಗಳ ಮೂಲಕ ಬಿಡಾಡಿ ದನಗಳ ವಿಳಾಸ ಪತ್ತೆ ಹಚ್ಚಿ ಸಂಬಂಧಿಸಿದವರಿಗೆ ಎಚ್ಚರಿಕೆ ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹವಾಗಿದೆ.

ಪ್ರತಿನಿತ್ಯ ಸುಮಾರು ಬಿಡಾಡಿ ದನಗಳು ಕೊಟ್ಟಿಗೆಹಾರ ಪೇಟೆಯ ರಸ್ತೆ ಮಧ್ಯದಲ್ಲಿ ಮಲಗುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಸಂಬಂಧಿಸಿದ ಅಧಿಕಾರಿಗಳು ಬಿಡಾಡಿ ದನಗಳ ಹಾವಳಿಗೆ ಕಡೀವಾಣ ಹಾಕಬೇಕು’

ಸಂಜಯ್ ಗೌಡ ಕೊಟ್ಟಿಗೆಹಾರ, ಗ್ರಾಮಸ್ಥ,

ಇತ್ತೀಚಿನ ಸುದ್ದಿ

ಜಾಹೀರಾತು