5:52 AM Wednesday28 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ ಪೇಟೆಯಲ್ಲಿ ಬಿಡಾಡಿ ದನಗಳ ಹಾವಳಿ: ಕಡಿವಾಣಕ್ಕೆ ಸಾರ್ವಜನಿಕರ ಒತ್ತಾಯ

17/02/2022, 16:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿಲ್ಲುಪುರಂ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೊಟ್ಟಿಗೆಹಾರದಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ವಾಹನ ಸವಾರರು, ವರ್ತಕರು ಕಿರಿಕಿರಿ ಅನುಭವಿಸುವಂತಾಗಿದೆ.

ಇಲ್ಲಿನ ರಸ್ತೆಯಲ್ಲಿ 30ಕ್ಕೂ ಅಧಿಕ ಬಿಡಾಡಿ ದನಗಳು ರಸ್ತೆಯಲ್ಲಿ ಮಲಗಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಅತಿ ಹೆಚ್ಚು ಬಿಡಾಡಿ ದನಗಳು ಮಾಲೀಕರಿದ್ದರೂ ಅವುಗಳನ್ನು ಮೇಯಿಸಲು ಹೊಲಗಳಿಗೆ ಬಿಡದೇ ಅವುಗಳು ರಸ್ತೆ, ಬಸ್ ನಿಲ್ದಾಣ, ಅಂಗಡಿ ಬಾಗಿಲುಗಳ ಮುಂದೆ ಮಲಗಿ ಆಶ್ರಯ ಪಡೆಯುತ್ತಿವೆ. ಅಂಗಡಿ, ಬಸ್ ನಿಲ್ದಾಣದಲ್ಲಿ ಮಲಗಿ ಸಗಣಿ ಹಾಕಿ ಗಂಜಲವನ್ನು ಹಾಕಿ ಇಡೀ ಸ್ಥಳವನ್ನೇ ಕಲುಷಿತಗೊಳಿಸುತ್ತಿವೆ. 

ಕೊಟ್ಟಿಗೆಹಾರದ ಬಸ್ ನಿಲ್ದಾಣದಲ್ಲಂತೂ ದನಗಳ ಗಂಜಲದಿಂದ ಬಸ್ ನಿಲ್ದಾಣ ಗಲೀಜಾಗಿದೆ. ಅಂಗಡಿ-ಮುಂಗಟ್ಟುಗಳ ವರ್ತಕರಿಗೆ ಬೆಳಿಗ್ಗೆ ಸಗಣಿ, ಗಂಜಲ ಎತ್ತಿ ಸ್ವಚ್ಚಗೊಳಿಸುವುದೇ ಒಂದು ಕಾಯಕವಾಗಿದೆ. ಅಲ್ಲದೇ ವಾಹನಗಳು ವೇಗವಾಗಿ ಸಂಚಾರಿಸುವ ವೇಳೆ ರಸ್ತೆಯಲ್ಲಿ ಅತ್ತಿತ್ತ ಓಡಾಡಿ ಬೈಕು,ಕಾರು,ಬಸ್ಸುಗಳ ಮುಂದೆ ಬಂದು ಅಪಘಾತಗಳಿಗೂ ಎಡೆಮಾಡಿಕೊಡುತ್ತಿವೆ. ದ್ವಿಚಕ್ರ ಸವಾರರಂತೂ ಜೀವವನ್ನು ಕೈಯಲ್ಲೇ ಇಟ್ಟು ವಾಹನವನ್ನು ಚಲಾಯಿಸಬೇಕಿದೆ. ರಸ್ತೆಯಲ್ಲಿ ಓಡಾಡುವ ಬಿಡಾಡಿ ದನಗಳಿಗೆ ಪಶು ಇಲಾಖೆ ವತಿಯಿಂದ ವಿಮೆ ಮಾಡಿ ಕಿವಿಗೆ ಗುರುತು ಪಟ್ಟಿ ಕೂಡ ಹಾಕಿದ್ದು ಆ ಕಿವಿ ಪಟ್ಟಿಗಳ ಮೂಲಕ ಬಿಡಾಡಿ ದನಗಳ ವಿಳಾಸ ಪತ್ತೆ ಹಚ್ಚಿ ಸಂಬಂಧಿಸಿದವರಿಗೆ ಎಚ್ಚರಿಕೆ ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹವಾಗಿದೆ.

ಪ್ರತಿನಿತ್ಯ ಸುಮಾರು ಬಿಡಾಡಿ ದನಗಳು ಕೊಟ್ಟಿಗೆಹಾರ ಪೇಟೆಯ ರಸ್ತೆ ಮಧ್ಯದಲ್ಲಿ ಮಲಗುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಸಂಬಂಧಿಸಿದ ಅಧಿಕಾರಿಗಳು ಬಿಡಾಡಿ ದನಗಳ ಹಾವಳಿಗೆ ಕಡೀವಾಣ ಹಾಕಬೇಕು’

ಸಂಜಯ್ ಗೌಡ ಕೊಟ್ಟಿಗೆಹಾರ, ಗ್ರಾಮಸ್ಥ,

ಇತ್ತೀಚಿನ ಸುದ್ದಿ

ಜಾಹೀರಾತು