1:41 PM Thursday18 - June 2026
ಬ್ರೇಕಿಂಗ್ ನ್ಯೂಸ್
ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ ಪೇಟೆಯಲ್ಲಿ ಬಿಡಾಡಿ ದನಗಳ ಹಾವಳಿ: ಕಡಿವಾಣಕ್ಕೆ ಸಾರ್ವಜನಿಕರ ಒತ್ತಾಯ

17/02/2022, 16:51

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿಲ್ಲುಪುರಂ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಕೊಟ್ಟಿಗೆಹಾರದಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು, ವಾಹನ ಸವಾರರು, ವರ್ತಕರು ಕಿರಿಕಿರಿ ಅನುಭವಿಸುವಂತಾಗಿದೆ.

ಇಲ್ಲಿನ ರಸ್ತೆಯಲ್ಲಿ 30ಕ್ಕೂ ಅಧಿಕ ಬಿಡಾಡಿ ದನಗಳು ರಸ್ತೆಯಲ್ಲಿ ಮಲಗಿ ವಾಹನ ಸಂಚಾರಕ್ಕೆ ತೊಡಕಾಗಿದೆ. ಅತಿ ಹೆಚ್ಚು ಬಿಡಾಡಿ ದನಗಳು ಮಾಲೀಕರಿದ್ದರೂ ಅವುಗಳನ್ನು ಮೇಯಿಸಲು ಹೊಲಗಳಿಗೆ ಬಿಡದೇ ಅವುಗಳು ರಸ್ತೆ, ಬಸ್ ನಿಲ್ದಾಣ, ಅಂಗಡಿ ಬಾಗಿಲುಗಳ ಮುಂದೆ ಮಲಗಿ ಆಶ್ರಯ ಪಡೆಯುತ್ತಿವೆ. ಅಂಗಡಿ, ಬಸ್ ನಿಲ್ದಾಣದಲ್ಲಿ ಮಲಗಿ ಸಗಣಿ ಹಾಕಿ ಗಂಜಲವನ್ನು ಹಾಕಿ ಇಡೀ ಸ್ಥಳವನ್ನೇ ಕಲುಷಿತಗೊಳಿಸುತ್ತಿವೆ. 

ಕೊಟ್ಟಿಗೆಹಾರದ ಬಸ್ ನಿಲ್ದಾಣದಲ್ಲಂತೂ ದನಗಳ ಗಂಜಲದಿಂದ ಬಸ್ ನಿಲ್ದಾಣ ಗಲೀಜಾಗಿದೆ. ಅಂಗಡಿ-ಮುಂಗಟ್ಟುಗಳ ವರ್ತಕರಿಗೆ ಬೆಳಿಗ್ಗೆ ಸಗಣಿ, ಗಂಜಲ ಎತ್ತಿ ಸ್ವಚ್ಚಗೊಳಿಸುವುದೇ ಒಂದು ಕಾಯಕವಾಗಿದೆ. ಅಲ್ಲದೇ ವಾಹನಗಳು ವೇಗವಾಗಿ ಸಂಚಾರಿಸುವ ವೇಳೆ ರಸ್ತೆಯಲ್ಲಿ ಅತ್ತಿತ್ತ ಓಡಾಡಿ ಬೈಕು,ಕಾರು,ಬಸ್ಸುಗಳ ಮುಂದೆ ಬಂದು ಅಪಘಾತಗಳಿಗೂ ಎಡೆಮಾಡಿಕೊಡುತ್ತಿವೆ. ದ್ವಿಚಕ್ರ ಸವಾರರಂತೂ ಜೀವವನ್ನು ಕೈಯಲ್ಲೇ ಇಟ್ಟು ವಾಹನವನ್ನು ಚಲಾಯಿಸಬೇಕಿದೆ. ರಸ್ತೆಯಲ್ಲಿ ಓಡಾಡುವ ಬಿಡಾಡಿ ದನಗಳಿಗೆ ಪಶು ಇಲಾಖೆ ವತಿಯಿಂದ ವಿಮೆ ಮಾಡಿ ಕಿವಿಗೆ ಗುರುತು ಪಟ್ಟಿ ಕೂಡ ಹಾಕಿದ್ದು ಆ ಕಿವಿ ಪಟ್ಟಿಗಳ ಮೂಲಕ ಬಿಡಾಡಿ ದನಗಳ ವಿಳಾಸ ಪತ್ತೆ ಹಚ್ಚಿ ಸಂಬಂಧಿಸಿದವರಿಗೆ ಎಚ್ಚರಿಕೆ ನೀಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಆಗ್ರಹವಾಗಿದೆ.

ಪ್ರತಿನಿತ್ಯ ಸುಮಾರು ಬಿಡಾಡಿ ದನಗಳು ಕೊಟ್ಟಿಗೆಹಾರ ಪೇಟೆಯ ರಸ್ತೆ ಮಧ್ಯದಲ್ಲಿ ಮಲಗುವುದರಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಸಂಬಂಧಿಸಿದ ಅಧಿಕಾರಿಗಳು ಬಿಡಾಡಿ ದನಗಳ ಹಾವಳಿಗೆ ಕಡೀವಾಣ ಹಾಕಬೇಕು’

ಸಂಜಯ್ ಗೌಡ ಕೊಟ್ಟಿಗೆಹಾರ, ಗ್ರಾಮಸ್ಥ,

ಇತ್ತೀಚಿನ ಸುದ್ದಿ

ಜಾಹೀರಾತು