10:35 PM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಬಿಡಾಡಿ ದನಗಳ ಹಾವಳಿ: ಸಂಚಾರಕ್ಕೆ ತೊಂದರೆ

08/08/2024, 19:20

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಬಣಕಲ್, ಕೊಟ್ಟಿಗೆಹಾರ ಪಟ್ಟಣಗಳಲ್ಲಿ ಬಿಡಾಡಿ ದನಗಳ ಹಾವಳಿ ಹೆಚ್ಚಾಗಿದ್ದು,ಸವಾರರು, ವರ್ತಕರು ತೊಂದರೆ ಅನುಭವಿಸುವಂತಾಗಿದೆ. ಬಣಕಲ್, ಕೊಟ್ಟಿಗೆಹಾರ ಸುತ್ತಮುತ್ತ 50ಕ್ಕೂ ಅಧಿಕ ಬಿಡಾಡಿ ದನಗಳು ಬಸ್ ನಿಲ್ದಾಣ, ರಸ್ತೆ, ಅಂಗಡಿಗಳ ಮುಂದೆ ಮುಂತಾದ ಕಡೆಗಳಲ್ಲಿ ಬೇಕಾಬಿಟ್ಟಿ ಓಡಾಡಿಕೊಂಡಿರುತ್ತವೆ. ಹಗಲು ವೇಳೆಯಲ್ಲಿ ರಸ್ತೆಯಲ್ಲಿ ಸಾಲುಗಟ್ಟಿ ಮಲಗುವ ಬಿಡಾಡಿ ದನಗಳು ರಾತ್ರಿಯಿದ್ದಂತೆ ಆಟೋ ನಿಲ್ದಾಣ, ಅಂಗಡಿ ಮುಂಗಟ್ಟುಗಳ ಮುಂದೆ ಸಗಣಿ, ಗಂಜಲವನ್ನು ಹಾಕಿ ಪರಿಸರ ಕಲುಷಿತಗೊಳಿಸುತ್ತವೆ. ವರ್ತಕರಿಗಂತೂ ಬೆಳಿಗ್ಗೆ ಅಂಗಡಿ ತೆರೆಯಲು ದನಗಳ ಗಂಜಲ, ಸಗಣಿ ಎತ್ತುವುದೇ ದಿನ ನಿತ್ಯದ ಕಾಯಕವಾಗಿದೆ. ಇಲ್ಲಿ ಮಲಗುವ ದನಗಳಿಗೆ ಮಾಲೀಕರಿದ್ದು ಕೂಡ ಅವುಗಳನ್ನೇ ಕಟ್ಟಿ ಹಾಕದೇ ಬಿಡುವುದರಿಂದ ಇವು ಬಿಡಾಡಿ ದನಗಳಂತೆ ಆಗಿವೆ. ದನಗಳನ್ನು ಮಾಲೀಕರು ಕಟ್ಟುವ ಬಗ್ಗೆ ಗ್ರಾಮ ಪಂಚಾಯಿತಿ, ಪೊಲೀಸರು ಹಲವು ಬಾರಿ ಸಭೆಗಳನ್ನು ನಡೆಸಿ ಸೂಚಿಸಿದ್ದರೂ ಯಾವುದೇ ಪ್ರಯೋಜನವಾಗದೇ ದನಗಳ ಕಾಟ ತೀರಾ ಹೆಚ್ಚಾಗಿದೆ. ಇದಲ್ಲದೇ ವಾಹನ ಸಂಚರಿಸುವ ವೇಳೆ ದನಗಳು ಗುಂಪಾಗಿ ರಸ್ತೆಯಲ್ಲಿ ಮಲಗಿ ಅನೇಕ ಅಪಘಾತಗಳು ಸಂಭವಿಸುತ್ತಿವೆ. ವಾಹನಗಳು ಬರುವಾಗ ದನಗಳು ಆ ಕಡೆ ಓಡಾಡುವುದರಿಂದ ವಾಹನಗಳಿಗೆ ಅವು ತಾಗಿ ವಾಹನಕ್ಕೂ ಹಾನಿಯಾಗುತ್ತಿದೆ. ಸಂಬಂಧಿಸಿದ ಅಧಿಕಾರಿಗಳು ಇನ್ನಾದರೂ ದನಗಳ ಮಾಲೀಕರನ್ನು ಪತ್ತೆ ಸೂಕ್ತ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಬಿಡಾಡಿ ದನಗಳ ಕಿವಿಗಳಿಗೆ ಗುರುತು ಹಚ್ಚಲು ಪಶು ವೈದ್ಯ ಇಲಾಖೆಯವರು ಬಿಲ್ಲೆಗಳನ್ನು ಹಾಕಿದ್ದಾರೆ. ಅದರಲ್ಲಿ ಮಾಲೀಕರ ವಿವರ ಇರುತ್ತದೆ. ಇದರಿಂದ ಬಿಡಾಡಿ ದನಗಳ ಮಾಲೀಕರ ಗುರುತು ಪತ್ತೆಯಾಗುತ್ತದೆ. ಈ ಬಗ್ಗೆ ಅಧಿಕಾರಿಗಳು ಕ್ರಮ ವಹಿಸಬೇಕು'.

—ಬಿ.ಸಿ. ಪ್ರವೀಣ್, ಮುಖಂಡರು, ಬಣಕಲ್.

ಇತ್ತೀಚಿನ ಸುದ್ದಿ

ಜಾಹೀರಾತು