10:17 AM Monday6 - July 2026
ಬ್ರೇಕಿಂಗ್ ನ್ಯೂಸ್
ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ ಶ್ರೀ ಸೀತಾರಾಮ ದೇವಸ್ಥಾನಕ್ಕೆ ಸೋಲಾರ್ ಲೈಟ್ ಕೊಡುಗೆ

18/11/2023, 17:58

ಮಂಗಳೂರು(reporterkarnataka.com): ಕೊಟ್ಟಿಗೆಹಾರದ ಪವಿತ್ರ ಹಾಗೂ ಧಾರ್ಮಿಕ ಕ್ಷೇತ್ರ ಶ್ರೀ ಸೀತಾರಾಮ ದೇವಸ್ಥಾನಕ್ಕೆ ಜಿಲ್ಲೆಯ ಪ್ರತಿಷ್ಠಿತ ರೆಸಾರ್ಟ್ ಗಳಲ್ಲಿ ಒಂದಾದ ರಿವರ್ ವಿಸ್ಟ್ ಮಾಲಿಕರಾದ ಶ್ರೀಜಿತ್ ಅವರು ಸೋಲಾರ್ ಲೈಟ್ ಗಳನ್ನು ಕೊಡಿಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಲವಾರು ದಿನಗಳಿಂದ ಈ ಕ್ಷೇತ್ರಕ್ಕೆ ಸೋಲಾರ್ ಲೈಟ್ ಅನ್ನು ನೀಡಬೇಕೆಂದು ನಿರ್ಧರಿಸಿದೆ. ಆದರೆ ಇಂದು ಕಾಲ ಕೂಡಿಬಂದಿದೆ. ಈ ಕ್ಷೇತ್ರಕ್ಕೆ ಸಾವಿರಾರು ಭಕ್ತಾದಿಗಳು ಬರುವುದರಿಂದ ಇದರ ಉಪಯೋಗವನ್ನು ಪಡೆದುಕೊಳ್ಳಬೇಕೆಂದು ಅವರು ಹೇಳಿದರು.
ಧರ್ಮಸ್ಥಳ ಪಾದಯಾತ್ರೆ ಸಮಯದಲ್ಲಿ ಸಾವಿರಾರು ಭಕ್ತಾದಿಗಳು ಇಲ್ಲಿ ಸೇರುವುದರಿಂದ ಸೋಲಾರ್ ಲೈಟ್ ಉಪಯೋಗಕ್ಕೆ ಬರುತ್ತದೆ ಎಂದರು.
ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕರಾದ ಕಾರಂತ್, ದೇವಸ್ಥಾನದ ಮುಖ್ಯಸ್ಥರಾದ ನರೇಂದ್ರ ಗೌಡ, ವೇಣುಗೋಪಾಲ
ಪೈ, ಅಶ್ವಥ್ , ಸಾಗರ್ ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು