9:35 AM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ ಸುತ್ತಮುತ್ತ 3 ದಿನಗಳಿಂದ ನಿರಂತರ ಧಾರಾಕಾರ ಮಳೆ: ಆತಂಕಕ್ಕೀಡಾದ ಕಾಫಿ ಬೆಳೆಗಾರರು

30/09/2023, 15:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ‌ ಕೊಟ್ಟಿಗೆಹಾರ,ಬಣಕಲ್,ಚಾರ್ಮಾಡಿ ಘಾಟ್ ಸೇರಿದಂತೆ ಹಲವೆಡೆ ಗುರುವಾರದಿಂದ ಧಾರಾಕಾರ ಹಾಗೂ ಬಿರುಸಿನ ಗಾಳಿಯಿಂದ ಕೂಡಿದ ಮಳೆಯಾಗುತ್ತಿದ್ದು, ಕಾಫಿ ಬೆಳೆಗಾರರು ಆತಂಕಕ್ಕೀಡಾಗಿದ್ದಾರೆ.


ಕಾಫಿನಾಡಿನಲ್ಲಿ ಚಳಿಯ ವಾತಾವರಣ ನಿರ್ಮಾಣ ಗೊಂಡಿದೆ. ಕೊಟ್ಟಿಗೆಹಾರದಲ್ಲಿ ಗುರುವಾರ ಬೆಳಿಗ್ಗೆಯಿಂದ ಶನಿವಾರದವರೆಗೆ ಬೆಳಿಗ್ಗೆ ವರೆಗೆ 164.2ಮಿ.ಮೀ (16ಸೆ.ಮೀ)ಮಳೆ ದಾಖಲಾಗಿದೆ. ಶನಿವಾರವೂ ಮಳೆ ಮುಂದುವರೆದಿದ್ದು ರೈತರ ಕೃಷಿ ಚಟುವಟಿಕೆ ಸ್ಥಗಿತಗೊಂಡಿದ್ದು ರೈತರು ಮಳೆಯಿಂದ ಹೈರಾಣಾದ್ದಾರೆ. ಕಾಫಿ ನಾಡಿನಲ್ಲಿ ಈಗ ಅರೆಬಿಕಾ ಕಾಫಿ ಕೆಲವು ಕಡೆ ಹಣ್ಣಾಗುತ್ತಿದ್ದು ಮಳೆಯಿಂದ ತೊಂದರೆ ಅನುಭವಿಸುವಂತಾಗಿದೆ. ತೀರಾ ಮಳೆಯಿಂದ ರೊಬಸ್ಟ ಕಾಫಿ ಕೂಡ ಉದುರುತ್ತಿದೆ.ಇನ್ನು ಅತಿಯಾದ ಮಳೆಯ ಹಿನ್ನಲೆಯಲ್ಲಿ ಅಡಿಕೆ ಕೂಡ ಶೀತ ಬಾಧೆಯಿಂದ ಮರದಿಂದ ಅಡಿಕೆ ಉದುರುತ್ತಿದೆ. ಮಳೆಗಾಲದ ಸಕಾಲ ಮಳೆಗಳು ಬಾರದೇ ಈಗ ಸೆಪ್ಟೆಂಬರ್ ಕೊನೆಯ ವಾರದಲ್ಲಿ ಮಳೆ ಬರುತ್ತಿರುವುದರಿಂದ ಹವಾಮಾನ ಬದಲಾವಣೆಗೊಂಡು ಕಾರ್ಮಿಕರು ಕೆಲಸಕ್ಕೆ ತೆರಳಲು ಅನಾನುಕೂಲವಾಗಿದೆ. .ಮಳೆಯಿಂದ ಕೊಟ್ಟಿಗೆಹಾರ, ಅತ್ತಿಗೆರೆ, ಸುತ್ತಮುತ್ತ ಸೇರಿದಂತೆ ವಿದ್ಯುತ್ ಕಣ್ಮುಚ್ಟಾಲೆಯಾಡುತ್ತಿದೆ.ಧಾರಾಕಾರ ಮಳೆಯಿಂದ ಜನರು ಹೈರಾಣಾಗುವಂತಾಗಿದೆ.ಮಳೆಯ ನಡುವೆ ಕಾಫಿನಾಡಿಗೆ ಬರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು