10:59 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ ಸುತ್ತಮುತ್ತ 3 ದಿನಗಳಿಂದ ನಿರಂತರ ಧಾರಾಕಾರ ಮಳೆ: ಆತಂಕಕ್ಕೀಡಾದ ಕಾಫಿ ಬೆಳೆಗಾರರು

30/09/2023, 15:25

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ‌ ಕೊಟ್ಟಿಗೆಹಾರ,ಬಣಕಲ್,ಚಾರ್ಮಾಡಿ ಘಾಟ್ ಸೇರಿದಂತೆ ಹಲವೆಡೆ ಗುರುವಾರದಿಂದ ಧಾರಾಕಾರ ಹಾಗೂ ಬಿರುಸಿನ ಗಾಳಿಯಿಂದ ಕೂಡಿದ ಮಳೆಯಾಗುತ್ತಿದ್ದು, ಕಾಫಿ ಬೆಳೆಗಾರರು ಆತಂಕಕ್ಕೀಡಾಗಿದ್ದಾರೆ.


ಕಾಫಿನಾಡಿನಲ್ಲಿ ಚಳಿಯ ವಾತಾವರಣ ನಿರ್ಮಾಣ ಗೊಂಡಿದೆ. ಕೊಟ್ಟಿಗೆಹಾರದಲ್ಲಿ ಗುರುವಾರ ಬೆಳಿಗ್ಗೆಯಿಂದ ಶನಿವಾರದವರೆಗೆ ಬೆಳಿಗ್ಗೆ ವರೆಗೆ 164.2ಮಿ.ಮೀ (16ಸೆ.ಮೀ)ಮಳೆ ದಾಖಲಾಗಿದೆ. ಶನಿವಾರವೂ ಮಳೆ ಮುಂದುವರೆದಿದ್ದು ರೈತರ ಕೃಷಿ ಚಟುವಟಿಕೆ ಸ್ಥಗಿತಗೊಂಡಿದ್ದು ರೈತರು ಮಳೆಯಿಂದ ಹೈರಾಣಾದ್ದಾರೆ. ಕಾಫಿ ನಾಡಿನಲ್ಲಿ ಈಗ ಅರೆಬಿಕಾ ಕಾಫಿ ಕೆಲವು ಕಡೆ ಹಣ್ಣಾಗುತ್ತಿದ್ದು ಮಳೆಯಿಂದ ತೊಂದರೆ ಅನುಭವಿಸುವಂತಾಗಿದೆ. ತೀರಾ ಮಳೆಯಿಂದ ರೊಬಸ್ಟ ಕಾಫಿ ಕೂಡ ಉದುರುತ್ತಿದೆ.ಇನ್ನು ಅತಿಯಾದ ಮಳೆಯ ಹಿನ್ನಲೆಯಲ್ಲಿ ಅಡಿಕೆ ಕೂಡ ಶೀತ ಬಾಧೆಯಿಂದ ಮರದಿಂದ ಅಡಿಕೆ ಉದುರುತ್ತಿದೆ. ಮಳೆಗಾಲದ ಸಕಾಲ ಮಳೆಗಳು ಬಾರದೇ ಈಗ ಸೆಪ್ಟೆಂಬರ್ ಕೊನೆಯ ವಾರದಲ್ಲಿ ಮಳೆ ಬರುತ್ತಿರುವುದರಿಂದ ಹವಾಮಾನ ಬದಲಾವಣೆಗೊಂಡು ಕಾರ್ಮಿಕರು ಕೆಲಸಕ್ಕೆ ತೆರಳಲು ಅನಾನುಕೂಲವಾಗಿದೆ. .ಮಳೆಯಿಂದ ಕೊಟ್ಟಿಗೆಹಾರ, ಅತ್ತಿಗೆರೆ, ಸುತ್ತಮುತ್ತ ಸೇರಿದಂತೆ ವಿದ್ಯುತ್ ಕಣ್ಮುಚ್ಟಾಲೆಯಾಡುತ್ತಿದೆ.ಧಾರಾಕಾರ ಮಳೆಯಿಂದ ಜನರು ಹೈರಾಣಾಗುವಂತಾಗಿದೆ.ಮಳೆಯ ನಡುವೆ ಕಾಫಿನಾಡಿಗೆ ಬರುವ ಪ್ರವಾಸಿಗರ ಸಂಖ್ಯೆಯೂ ಹೆಚ್ಚಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು