8:45 AM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಸ್ನೇಹಿತನ ಗೃಹ ಪ್ರವೇಶಕ್ಕೆ ಆಗಮಿಸಿದ ಮಾಜಿ ಡಿಸಿಎಂ ಅಶ್ವತ್ ನಾರಾಯಣ ದಂಪತಿ

18/02/2025, 19:49

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪದ ಅತ್ತಿಗೆರೆ ಗ್ರಾಮಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಉಪ ಮುಖ್ಯಮಂತ್ರಿ  ಹಾಗೂ ಮಲ್ಲೇಶ್ವರಂ ಕ್ಷೇತ್ರದ ಶಾಸಕ ಡಾ. ಅಶ್ವಥ್ ನಾರಾಯಣ ಅವರನ್ನು ಅಭಿನಂದಿಸಲಾಯಿತು.
ಸೋಮವಾರ ಅತ್ತಿಗೆರೆ ಗ್ರಾಮದ ತಮ್ಮ ಬಂಧು ಮತ್ತು ಸ್ನೇಹಿತರಾದ ಚೇತನ್ ಅತ್ತಿಗೆರೆ ಅವರ ಮನೆಯ ಗೃಹಪ್ರವೇಶಕ್ಕೆ ಡಾ. ಅಶ್ವಥ್ ನಾರಾಯಣ ಅವರು ಪತ್ನಿ ಶೃತಿ ಅವರೊಂದಿಗೆ ಆಗಮಿಸಿ ಶುಭ ಹಾರೈಸಿದರು.


ಚೇತನ್ ಅವರು ಬೆಂಗಳೂರಿನಲ್ಲಿ ಯುವ ಉದ್ಯಮಿಯಾಗಿದ್ದು, ಈ ಹಿಂದೆ ಡಾ. ಅಶ್ವಥ ನಾರಾಯಣ ಅವರ ಮಾರ್ಗದರ್ಶನದಲ್ಲಿ ಅವರ ಮಾಲೀಕತ್ವದ ಕಂಪನಿಯಲ್ಲಿ ಕಾರ್ಯನಿರ್ವಹಿಸಿದ್ದರು.
ಗೃಹ ಪ್ರವೇಶಕ್ಕೆ ಆಗಮಿಸಿದ್ದ  ಡಾ. ಅಶ್ವಥ್ ನಾರಾಯಣ ಮತ್ತು ಪತ್ನಿ ಶೃತಿ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.
ಮುಖಂಡರಾದ ದೀಪಕ್ ದೊಡ್ಡಯ್ಯ, ಬಿ.ಎನ್. ಜಯಂತ್, ಜೆ.ಎಸ್.ರಘು,  ಸುಂದ್ರೇಶ್ ಕೊಣಗೆರೆ, ಸುರೇಂದ್ರ ಕೊಣಗೆರೆ, ಸಂಜಯ್ ಕೊಟ್ಟಿಗೆಹಾರ, ನಾಗೇಶ್ ಅತ್ತಿಗೆರೆ, ಚೇತನ್ ಅತ್ತಿಗೆರೆ ಅವರ ಕುಟುಂಬದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು