2:07 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ರಾಷ್ಟ್ರೀಯ ಹೆದ್ದಾರಿಯಲ್ಲಿ 10 ಚಕ್ರದ ಲಾರಿ ಪಲ್ಟಿ; ಟ್ರಾಫಿಕ್ ಜಾಮ್; ನಿದ್ದೆಗೆಟ್ಟ ಪೊಲೀಸರು

17/09/2023, 15:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪ್ಲೈವುಡ್ ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿ ಯಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಹೊರಟ್ಟಿ ಎಂಬ ಗ್ರಾಮದಲ್ಲಿ ನಡೆದಿದೆ. ಮೂಡಿಗೆರೆಯ ಸಾಮಿಲ್ ನಲ್ಲಿ ಪ್ಲೈವುಡ್ ತುಂಬಿಕೊಂಡು ಮಹಾರಾಷ್ಟ್ರಕ್ಕೆ ಹೋಗುತ್ತಿದ್ದ ಹತ್ತು ಚಕ್ರದ ಲಾರಿ ಮೂಡಿಗೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಪಲ್ಟಿಯಾಗಿದೆ. ಲಾರಿ ಚಾಲಕ ಅತಿಯಾದ ವೇಗದಲ್ಲಿ ಇದ್ದ ಕಾರಣ ಲಾರಿ ನಿಯಂತ್ರಣಕ್ಕೆ ಸಿಗದೆ ಪಲ್ಟಿಯಾಗಿದೆ. ಲಾರಿಯ ಚಾಲಕ ಹಾಗೂ ಕ್ಲೀನರ್ ಗೆ ಗಾಯಗಳಾಗಿದ್ದು, ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ 10 ಚಕ್ರದ ಲಾರಿ ಪಲ್ಟಿಯಾದ ಕಾರಣ ಕೆಲಕಾಲ ಟ್ರಾಫಿಕ್ ಜಾಮ್ ಕೂಡ ಸಂಭವಿಸಿತ್ತು.


ಕಳೆದ ರಾತ್ರಿ 1 ಗಂಟೆ ಸುಮಾರಿಗೆ ಈ ಅನಾಹುತ ಸಂಭವಿಸಿದ್ದು, ಸುಮಾರು ಎರಡು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿತ್ತು. ರಾಷ್ಟ್ರೀಯ ಹೆದ್ದಾರಿ, ವೀಕ್ ಎಂಡ್ ಹಾಗೂ ಹಬ್ಬದ ರಜೆ ಹಾಗೂ ಚಿಕ್ಕಮಗಳೂರು, ಮೂಡಿಗೆರೆಯಿಂದ. ಉಡುಪಿ-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿರುವುದರಿಂದ ವಾಹನಗಳು ಅತೀ ವೇಗವಾಗಿ ಓಡಾಡುತ್ತಿರುತ್ತೆ. ಹಾಗಾಗಿ, ಯಾವುದೇ ಅನಾಹುತ ಸಂಭವಿಸಬಾರದೆಂದು ರಾತ್ರಿ 1 ಗಂಟೆಗೆ ಸ್ಥಳಕ್ಕೆ ಬಂದ ಬಣಕಲ್ ಪೊಲೀಸರು ಇಡೀ ರಾತ್ರಿ ಸ್ಥಳದಲ್ಲೇ ಕಾವಲಿದ್ದು ಯಾವುದೇ ಅನಾಹುತ ಸಂಭವಿಸದಂತೆ ಎಚ್ಚರ ವಹಿಸಿದ್ದಾರೆ. ಇಡೀ ರಾತ್ರಿ ಸ್ಥಳದಲ್ಲಿ ಕಾವಲಿದ್ದ ಪೊಲೀಸರು ಬೆಳಗ್ಗೆ ಜೆಸಿಬಿ ತರಿಸಿ ಲಾರಿಯನ್ನ ಒಂದು ಬದಿಗೆ ಸರಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು