5:50 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ರಾಷ್ಟ್ರೀಯ ಹೆದ್ದಾರಿಯಲ್ಲಿ 10 ಚಕ್ರದ ಲಾರಿ ಪಲ್ಟಿ; ಟ್ರಾಫಿಕ್ ಜಾಮ್; ನಿದ್ದೆಗೆಟ್ಟ ಪೊಲೀಸರು

17/09/2023, 15:16

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಪ್ಲೈವುಡ್ ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿ ಯಾಗಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಹೊರಟ್ಟಿ ಎಂಬ ಗ್ರಾಮದಲ್ಲಿ ನಡೆದಿದೆ. ಮೂಡಿಗೆರೆಯ ಸಾಮಿಲ್ ನಲ್ಲಿ ಪ್ಲೈವುಡ್ ತುಂಬಿಕೊಂಡು ಮಹಾರಾಷ್ಟ್ರಕ್ಕೆ ಹೋಗುತ್ತಿದ್ದ ಹತ್ತು ಚಕ್ರದ ಲಾರಿ ಮೂಡಿಗೆರೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಪಲ್ಟಿಯಾಗಿದೆ. ಲಾರಿ ಚಾಲಕ ಅತಿಯಾದ ವೇಗದಲ್ಲಿ ಇದ್ದ ಕಾರಣ ಲಾರಿ ನಿಯಂತ್ರಣಕ್ಕೆ ಸಿಗದೆ ಪಲ್ಟಿಯಾಗಿದೆ. ಲಾರಿಯ ಚಾಲಕ ಹಾಗೂ ಕ್ಲೀನರ್ ಗೆ ಗಾಯಗಳಾಗಿದ್ದು, ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ 10 ಚಕ್ರದ ಲಾರಿ ಪಲ್ಟಿಯಾದ ಕಾರಣ ಕೆಲಕಾಲ ಟ್ರಾಫಿಕ್ ಜಾಮ್ ಕೂಡ ಸಂಭವಿಸಿತ್ತು.


ಕಳೆದ ರಾತ್ರಿ 1 ಗಂಟೆ ಸುಮಾರಿಗೆ ಈ ಅನಾಹುತ ಸಂಭವಿಸಿದ್ದು, ಸುಮಾರು ಎರಡು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗಿತ್ತು. ರಾಷ್ಟ್ರೀಯ ಹೆದ್ದಾರಿ, ವೀಕ್ ಎಂಡ್ ಹಾಗೂ ಹಬ್ಬದ ರಜೆ ಹಾಗೂ ಚಿಕ್ಕಮಗಳೂರು, ಮೂಡಿಗೆರೆಯಿಂದ. ಉಡುಪಿ-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಾಗಿರುವುದರಿಂದ ವಾಹನಗಳು ಅತೀ ವೇಗವಾಗಿ ಓಡಾಡುತ್ತಿರುತ್ತೆ. ಹಾಗಾಗಿ, ಯಾವುದೇ ಅನಾಹುತ ಸಂಭವಿಸಬಾರದೆಂದು ರಾತ್ರಿ 1 ಗಂಟೆಗೆ ಸ್ಥಳಕ್ಕೆ ಬಂದ ಬಣಕಲ್ ಪೊಲೀಸರು ಇಡೀ ರಾತ್ರಿ ಸ್ಥಳದಲ್ಲೇ ಕಾವಲಿದ್ದು ಯಾವುದೇ ಅನಾಹುತ ಸಂಭವಿಸದಂತೆ ಎಚ್ಚರ ವಹಿಸಿದ್ದಾರೆ. ಇಡೀ ರಾತ್ರಿ ಸ್ಥಳದಲ್ಲಿ ಕಾವಲಿದ್ದ ಪೊಲೀಸರು ಬೆಳಗ್ಗೆ ಜೆಸಿಬಿ ತರಿಸಿ ಲಾರಿಯನ್ನ ಒಂದು ಬದಿಗೆ ಸರಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು