6:27 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಕೋಟ್ಯಂತರ ರೂ. ವಂಚನೆ ಪ್ರಕರಣ: ಪ್ರಮುಖ ಆರೋಪಿ ಕದಂ ಬಂಧನ; ಮುಂಬೈ, ಮಂಗಳೂರು ಪೊಲೀಸರ ಜಂಟೀ ಕಾರ್ಯಾಚರಣೆ

01/06/2023, 11:34

ಮಂಗಳೂರು(reporterkarnataka.com): ಸುಮಾರು 1.15 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರ ವಾಂಟೆಡ್ ಲಿಸ್ಟ್ ನಲ್ಲಿದ್ದ ಆರೋಪಿ ಕದಂ ಎಂಬತನನ್ನು ಮುಂಬೈನಲ್ಲಿ ಬಂಧಿಸಲಾಗಿದೆ.
ಆರೋಪಿ ಬಂಧನಕ್ಕಾಗಿ ಮಂಗಳೂರಿನಿಂದ ಮುಂಬೈಗೆ ತೆರಳಿದ್ದ ಸಿಸಿಬಿ ಪೊಲೀಸರ ತಂಡ ಮುಂಬೈ ಕ್ರೈಂ ಬ್ರಾಂಚ್ ಪೋಲಿಸರ ಸಹಾಯದಿಂದ ಕದಂನನ್ನು ವಶಕ್ಕೆ ತೆಗೆದುಕೊಂಡಿದೆ.
ಮಂಗಳೂರಿನ ಹೆಸರಾಂತ ಕಟ್ಟಡ ನಿರ್ಮಾಣ ಸಂಸ್ಥೆ ‘ರೋಹನ್ ಕಾರ್ಪೊರೇಷನ್ ‘ನ ಆಡಳಿತ ನಿರ್ದೇಶಕ ರೋಹನ್ ಮತ್ತು ಹರ್ಷ ಫೈನಾನ್ಸ್ ಮಾಲಕ ಹರೀಶ್ ಎಂಬವರಿಗೆ 1.15 ಕೋಟಿ ರೂ.ಗಳನ್ನು ವಂಚಿಸಿರುವ ಬಗ್ಗೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ಆರೋಪಿಗಳಾದ ಕದಂ ಮತ್ತು ಕಳತ್ತೂರು ವಿಶ್ವನಾಥ ಶೆಟ್ಟಿ ಇವರಿಬ್ಬರೂ ಸಂಚು ರೂಪಿಸಿ 300 ಕೋಟಿ ರೂ.ಸಾಲ ತೆಗೆಸಿ ಕೊಡುವ ಭರವಸೆ ನೀಡಿ ಈ ವಂಚನೆ ನಡೆಸಿದ್ದರು ಎಂದು ಪೊಲೀಸರು ದಾಖಲೆಸಿಕೊಂಡಿದ್ದಾರೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಉದ್ಯಮಿ ಕಳತ್ತೂರು ವಿಶ್ವನಾಥ ಶೆಟ್ಟಿ ಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು