10:05 AM Sunday15 - June 2025
ಬ್ರೇಕಿಂಗ್ ನ್ಯೂಸ್
Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ…

ಇತ್ತೀಚಿನ ಸುದ್ದಿ

ಕೋಟ್ಯಂತರ ರೂಪಾಯಿ ವಂಚನೆ ಆರೋಪ:ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಬಂಧನ

02/07/2021, 12:21

ಬೆಂಗಳೂರು(reporterkarnataka news): ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಅವರ ಬಂಧನವಾಗಿದೆ. ನೌಕರಿ ಕೊಡಿಸುವ, ವರ್ಗಾವಣೆ ಮಾಡಿಸುವ ನೆಪ ಹೇಳಿ ಕೋಟ್ಯಂತರ ರೂ. ವಂಚಿಸಿದ ಆರೋಪದ ಮೇಲೆ ಬಂಧನ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ. ವೈ. ವಿಜಯೇಂದ್ರ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬಂಧನ ನಡೆದಿದೆ.

ರಾಜಣ್ಣ ಅವರನ್ನು ಬೆಂಗಳೂರನಲ್ಲಿ ಸಚಿವ ಶ್ರೀರಾಮುಲು ಮನೆಯಿಂದ ಸಿಸಿಬಿ ತಂಡ ಬಂಧಿಸಿದೆ. ಸಚಿವರು ಕೂಡ ಆ ಸಂದರ್ಭದಲ್ಲಿ ಉಪಸ್ಥಿತರಿದ್ದರು ಎಂದು ತಿಳಿದು ಬಂದಿದೆ.

ರಾಜಣ್ಣ ಸಚಿವ ಶ್ರೀರಾಮುಲು ಜತೆಗೆ ವಿಜಯೇಂದ್ರ ಅವರ ಹೆಸರನ್ನು ಕೂಡ ದುರ್ಬಳಕೆ ಮಾಡುತ್ತಿದ್ದರು ಎಂಬ ದೂರಿನ ಹಿನ್ನೆಲೆಯಲ್ಲಿ ದಸ್ತಗಿರಿ ಮಾಡಲಾಗಿದೆ.

ರಾಜಣ್ಣ ನೌಕರಿ ಹಾಗೂ ಅಧಿಕಾರಿಗಳಿಗೆ ವರ್ಗಾವಣೆ ಆಮಿಷಯೊಡ್ಡಿ ಕೋಟ್ಯಂತರ ಹಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಎರಡು ದಿನಗಳ ಹಿಂದೆ ರಾಜಣ್ಣ ವಿರುದ್ಧ ಎಫ್‌ಐಆರ್​ ದಾಖಲಾಗಿತ್ತು. ಗುರುವಾರ  ಬೆಳಗ್ಗೆಯಿಂದ  ಸಿಸಿಬಿ ಪೊಲೀಸರು ಹೊಂಚು ಹಾಕಿ ಇಂದು ರಾಜಣ್ಣ ಅವರನ್ನು ಬಂಧಿಸಿದ್ದಾರೆ.

ರಾಜಣ್ಣ ಅವರು ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಹೆಸರಲ್ಲಿಯೂ ಕೂಡ ವಂಚನೆ ಮಾಡಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಖುದ್ದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ರಾಮುಲು ಪಿಎ ವಿರುದ್ಧ ದೂರು ನೀಡಿದ್ದರು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು