12:12 PM Friday31 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕೋಟ್ಯಂತರ ರೂಪಾಯಿ ವಂಚನೆ ಆರೋಪ:ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಬಂಧನ

02/07/2021, 12:21

ಬೆಂಗಳೂರು(reporterkarnataka news): ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಅವರ ಬಂಧನವಾಗಿದೆ. ನೌಕರಿ ಕೊಡಿಸುವ, ವರ್ಗಾವಣೆ ಮಾಡಿಸುವ ನೆಪ ಹೇಳಿ ಕೋಟ್ಯಂತರ ರೂ. ವಂಚಿಸಿದ ಆರೋಪದ ಮೇಲೆ ಬಂಧನ ನಡೆದಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ. ವೈ. ವಿಜಯೇಂದ್ರ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬಂಧನ ನಡೆದಿದೆ.

ರಾಜಣ್ಣ ಅವರನ್ನು ಬೆಂಗಳೂರನಲ್ಲಿ ಸಚಿವ ಶ್ರೀರಾಮುಲು ಮನೆಯಿಂದ ಸಿಸಿಬಿ ತಂಡ ಬಂಧಿಸಿದೆ. ಸಚಿವರು ಕೂಡ ಆ ಸಂದರ್ಭದಲ್ಲಿ ಉಪಸ್ಥಿತರಿದ್ದರು ಎಂದು ತಿಳಿದು ಬಂದಿದೆ.

ರಾಜಣ್ಣ ಸಚಿವ ಶ್ರೀರಾಮುಲು ಜತೆಗೆ ವಿಜಯೇಂದ್ರ ಅವರ ಹೆಸರನ್ನು ಕೂಡ ದುರ್ಬಳಕೆ ಮಾಡುತ್ತಿದ್ದರು ಎಂಬ ದೂರಿನ ಹಿನ್ನೆಲೆಯಲ್ಲಿ ದಸ್ತಗಿರಿ ಮಾಡಲಾಗಿದೆ.

ರಾಜಣ್ಣ ನೌಕರಿ ಹಾಗೂ ಅಧಿಕಾರಿಗಳಿಗೆ ವರ್ಗಾವಣೆ ಆಮಿಷಯೊಡ್ಡಿ ಕೋಟ್ಯಂತರ ಹಣ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಎರಡು ದಿನಗಳ ಹಿಂದೆ ರಾಜಣ್ಣ ವಿರುದ್ಧ ಎಫ್‌ಐಆರ್​ ದಾಖಲಾಗಿತ್ತು. ಗುರುವಾರ  ಬೆಳಗ್ಗೆಯಿಂದ  ಸಿಸಿಬಿ ಪೊಲೀಸರು ಹೊಂಚು ಹಾಕಿ ಇಂದು ರಾಜಣ್ಣ ಅವರನ್ನು ಬಂಧಿಸಿದ್ದಾರೆ.

ರಾಜಣ್ಣ ಅವರು ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರ ಹೆಸರಲ್ಲಿಯೂ ಕೂಡ ವಂಚನೆ ಮಾಡಿದ್ದಾರೆ ಅನ್ನೋ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಖುದ್ದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ರಾಮುಲು ಪಿಎ ವಿರುದ್ಧ ದೂರು ನೀಡಿದ್ದರು ಎನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು