3:28 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಕೌಶಲ್ಯತೆ ಅಳವಡಿಸಿಕೊಂಡು ಯಶಸ್ವಿಯಾಗಿ: ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ

05/01/2025, 10:11

ಗಣೇಶನ್ ಇನಾಂದಾರ ಬಳ್ಳಾರಿ

info.reporterkarnataka@gmail.com

ಉತ್ತಮ ಅಂಕಗಳ ಜೊತೆಗೆ ಉದ್ಯೋಗಕ್ಕೆ ಬೇಕಾದ ಕೌಶಲ್ಯ ಗುಣಗಳನ್ನು ಅಳವಡಿಕೊಂಡು ಯಶಸ್ವಿಯಾಗಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ಸರಳಾದೇವಿ ಕಾಲೇಜು ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಉದ್ಯೋಗ ಮೇಳ 2025’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಉದ್ಯೋಗ ಪಡೆದುಕೊಳ್ಳುವುದಷ್ಟೇ ಆಗದೆ ಈ ಭಾಗದಲ್ಲಿ ಉದ್ಯಮ ಸ್ಥಾಪನೆ ಮಾಡುವುದರ ಮೂಲಕ ಇತರರಿಗೂ ಉದ್ಯೋಗ ನೀಡುವಂತರಾಗಬೇಕು ಎಂದರು.
ಕ್ರಿಯಾಶೀಲ ಮನೋಭಾವ, ಸ್ಪರ್ಧಾತ್ಮಕ ಮನಸ್ಸು, ಸತತ ಪ್ರಯತ್ನದಿಂದ ಬದುಕು ರೂಪಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಮಾತನಾಡಿ, ಬದುಕಿನಲ್ಲಿ ಉತ್ತಮ ಸಾಧಕರಾಗಲು ಕಠಿಣ ಪರಿಶ್ರಮ, ಸಂವಹನ ಕಲೆ, ಭಾಷೆಯ ಮೇಲೆ ಉತ್ತಮ ಹಿಡಿತ, ಸಾಧಿಸುವ ಛಲದಂತಹ ಗುಣಗಳನ್ನು ಮೈಗೂಡಿಸಿಕೊಳ್ಳುವುದು ಅವಶ್ಯ ಎಂದರು.
ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಯಶವಂತ್ ರಾಜ್ ನಾಗಿರೆಡ್ಡಿ ಅವರು ಮಾತನಾಡಿ, ಇಂತಹ ಉದ್ಯೋಗ ಮೇಳಗಳು ಈ ಭಾಗದ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವಲ್ಲಿ ಸಹಕಾರಿಯಾಗುತ್ತವೆ. ನಮ್ಮ ವಾಣಿಜ್ಯೋದ್ಯಮ ಮಂಡಳಿಯು ಇಂತಹ ಚಟುವಟಿಕೆಗಳಿಗೆ ಸದಾ ಸಹಕರಿಸುತ್ತದೆ ಎಂದರು.
ಉದ್ಯೋಗ ಮೇಳದ ಬಗೆಗೆ ಪ್ರಾಸ್ತವಿಕವಾಗಿ ಮಾತನಾಡಿದ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳಾದ ಪ್ರಾಣೇಶ್, ಈ ಮೇಳದಲ್ಲಿ 41 ಕಂಪನಿಗಳು ಭಾಗವಹಿಸಿವೆ. 1673 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಸಅ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಮೋನಿಕಾ ರಂಜನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಹಟ್ಟಪ್ಪ, ಉದ್ಯೋಗ ಭರವಸೆ ಕೋಶದ ಸಂಚಾಲಕ ಕಲ್ಯಾಣ ಬಸವ, ಕೌಶಲ್ಯಾಭಿವೃದ್ದಿ ಇಲಾಖೆಯ ಸಹಾಯಕ ನಿರ್ದೇಶಕ ವಿಶ್ವನಾಥ್, ಜಿಲ್ಲಾ ಅಭಿಯಾನ ವ್ಯವಸ್ಥಾಪಕರಾದ ದೇವರಾಜ್, ಪ್ರಾಣೇಶ್, ಎಎಸ್‌ಒ ಚಂದ್ರಮ್ಮ ಹಾಗೂ ಕಾಲೇಜಿನ ಪ್ರಾಧ್ಯಾಪಕರಾದ ಡಾ.ಪ್ರಹ್ಲಾದ್ ಚೌದ್ರಿ, ಡಾ.ಹೊನ್ನೂರಾಲಿ, ಡಾ.ಸೋಮನಾಥ, ಡಾ.ದಸ್ತಗೀರಸಾಬ್ ದಿನ್ನಿ, ಡಾ.ಚನ್ನ ಬಸವಯ್ಯ, ಡಾ.ಶ್ರೀನಿವಾಸ ರೆಡ್ಡಿ, ಪಂಪನಗೌಡ, ಡಾ.ಪಂಚಾಕ್ಷರಿ, ಡಾ.ಗುರುಬಸಪ್ಪ, ಡಾ.ದುರ್ಗಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು