11:21 AM Sunday14 - September 2025
ಬ್ರೇಕಿಂಗ್ ನ್ಯೂಸ್
Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ ಕರಾವಳಿಯಲ್ಲಿ ಸಂಭ್ರಮದ ಮೊಂತಿ ಹಬ್ಬ: ಚರ್ಚ್ ಗಳಲ್ಲಿ ವಿಶೇಷ ಬಲಿಪೂಜೆ; ತೆನೆ ವಿತರಣೆ ಮೈಸೂರು ದಸರಾ: ಗೋಲ್ಡ್​ ಕಾರ್ಡ್​; ಟಿಕೆಟ್​ ದರ ಎಷ್ಟು? ಖರೀದಿ ಹೇಗೆ? ಇಲ್ಲಿದೆ… Kodagu | ಮಡಿಕೇರಿ: ಮಾಂದಲಪಟ್ಟಿಗೆಯಲ್ಲಿ ಪ್ರವಾಸಿಗನ ಮೇಲೆ ಜೀಪ್ ಚಾಲಕ ಹಲ್ಲೆ

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಆಕ್ಷೇಪಾರ್ಹ ಕಮೆಂಟ್: ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಔಟ್; ಉಗ್ರಪ್ಪಗೆ ನೋಟಿಸ್ 

13/10/2021, 21:23

ಬೆಂಗಳೂರು(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುರಿತು ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ.ಸಲೀಂ ಅವರು ಪಕ್ಷದ ಇನ್ನೊಬ್ಬ ನಾಯಕ ವಿ.ಎಸ್. ಉಗ್ರಪ್ಪ ಅವರ ಜತೆಖಾಸಗಿ ಆಕ್ಷೇಪಾರ್ಹ ಮಾತುಕತೆ ನಡೆಸಿದ ಪ್ರಕರಣ ಪಕ್ಷದೊಳಗೆ ತೀವ್ರ ಸಂಚಲನ ಮೂಡಿಸಿದೆ.

ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷ ಡಾ.ಕೆ.ರಹ್ಮಾನ್ ಖಾನ್ ಅವರು ಎಂ.ಎ.ಸಲೀಂ ಅವರನ್ನು 6 ವರ್ಷಗಳ ಕಾಲ ಪಕ್ಷದ ಸದಸ್ಯತ್ವದಿಂದ ಉಚ್ಛಾಟಿಸಿದ್ದಾರೆ. ಈ ನಡುವೆ ಸಂಸದ ವಿ.ಎಸ್.ಉಗ್ರಪ್ಪಗೆ 3 ದಿನಗಳಲ್ಲಿ ಸಮಜಾಯಿಷಿ ನೀಡುವಂತೆ ಸೂಚಿಸಿ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ವಿ.ಎಸ್.ಉಗ್ರಪ್ಪ ಕರೆದಿದ್ದ ಸುದ್ದಿಗೋಷ್ಠಿ ಆರಂಭವಾಗುವುದಕ್ಕೆ ಮುನ್ನ ಸಲೀಂ ಅವರು ಖಾಸಗಿಯಾಗಿ ಉಗ್ರಪ್ಪ ಜತೆ ಗುಪ್ತವಾಗಿ 

ನಡೆಸಿದ ಮಾತುಕತೆ ಮಾಧ್ಯಮಗಳ ಕ್ಯಾಮಾರದಲ್ಲಿ ಸೆರೆಯಾಗಿ ವೈರಲ್ ಆಗಿತ್ತು. 

ಸಲೀಂ ಅಮಾನತು: ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ.ಸಲೀಮ್ ಅವರನ್ನು ತುರ್ತು ಶಿಸ್ತುಪಾಲನಾ ಸಮಿತಿಯ ಸಭೆಯಲ್ಲಿ ಸದಸ್ಯರ ಒಮ್ಮತದ ಅಭಿಪ್ರಾಯದಂತೆ ಬೇಜವಾಬ್ದಾರಿ ನಡವಳಿಕೆಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮುಂದಿನ 6 ವರ್ಷಗಳ ವರೆಗೆ ಉಚ್ಛಾಟಿಸಲಾಗಿದೆ ಎಂದು ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ.ರಹ್ಮಾನ್‍ಖಾನ್ ತಿಳಿಸಿದ್ದಾರೆ.

ಉಗ್ರಪ್ಪಗೆ ಶೋಕಾಸ್ ನೋಟಿಸ್: ತಾವು ಈ ಸಂದರ್ಭದಲ್ಲಿ ಮಾತನಾಡಿಕೊಂಡಿರುವ ವಿಚಾರಗಳು ಆಧಾರ ರಹಿತವಾಗಿದ್ದು, ಕಾಂಗ್ರೆಸ್ ಪಕ್ಷವು ಇದನ್ನು ಸಂಪೂರ್ಣವಾಗಿ ಖಂಡಿಸುತ್ತದೆ ಮತ್ತು ನಿರಾಕರಿಸುತ್ತದೆ. ಈ ಹಿನ್ನೆಲೆಯಲ್ಲಿ ತಾವು ತಮ್ಮ ಈ ಮೇಲಿನ ನಡವಳಿಕೆಯ ಬಗ್ಗೆ ತಕ್ಷಣ ಸಮಜಾಯಿಷಿಯನ್ನು ಮೂರು ದಿನಗಳ ಒಳಗಾಗಿ ನೀಡಬೇಕು ಎಂದು ಉಗ್ರಪ್ಪಗೆ ರಹ್ಮಾನ್ ಖಾನ್ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು