2:23 AM Thursday19 - September 2024
ಬ್ರೇಕಿಂಗ್ ನ್ಯೂಸ್
ಮಿಸ್ಟರ್ ಕರಾವಳಿ, ಮಿಸ್ ಕರಾವಳಿ ಪ್ರಶಸ್ತಿ ರಂಜಿತ್ ಗಾಣಿಗ ಹಾಗೂ ರಿಷಾ ಟಾನ್ಯಾ… ಮೇಯರ್ ಆಯ್ಕೆ ಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ವಾಕ್ಸಮರ: ಕೊನೆಗೆ ನಿರಾಳ, ಕೂಲ್ ಕೂಲ್!! ತೀರ್ಥಹಳ್ಳಿ: ಸರ್ವಧರ್ಮ ಸಮನ್ವಯತೆಯಲ್ಲಿ ಸಂಭ್ರಮ- ಸಡಗರದ ಈದ್ ಮಿಲಾದ್ ಆಚರಣೆ ನಂಜನಗೂಡು: ಮುನಿರತ್ನ ವಿರುದ್ಧ ಜನ ಸಂಗ್ರಾಮ ಪರಿಷತ್ ಪ್ರತಿಭಟನೆ: ಶಾಸಕ ಸ್ಥಾನದಿಂದ ವಜಾಗೊಳಿಸಲು… ಜೈಪುರದಲ್ಲಿ ಇಂಡಿಯನ್ ಯೂತ್ ಪಾಲಿ೯ಮೆಂಟ್ 27ನೇ ಅಧಿವೇಶನ: ಸ್ಪೀಕರ್ ಖಾದರ್ ಉದ್ಘಾಟನೆ ನಮ್ಮ‌ ಶಾಲೆ‌ ನಮ್ಮ‌ ಜವಾಬ್ದಾರಿ ಕಾರ್ಯಕ್ರಮ ಸರಕಾರಿ ಶಾಲಾ ಮಕ್ಕಳ ಉಜ್ವಲ ಭವಿಷ್ಯಕ್ಕೆ… ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಭಾರೀ ಫೈಟ್: ಮಹಿಳಾ ಅಭ್ಯರ್ಥಿಯಿಂದ ಪ್ರಬಲ ಪೈಪೋಟಿ ಮಹಿಳಾ ಆಯೋಗದ ಅಧ್ಯಕ್ಷೆ ಬಂದ್ರೂ ಅಧಿಕಾರಿಗಳು ನಾಪತ್ತೆ: ರಾಯಲ್ಪಾಡು ಪ್ರಾಥಮಿಕ ಆರೋಗ್ಯ ಕೇಂದ್ರ,… ಅಥಣಿ: ಶೌಚಕ್ಕೆ ಹೋದ ಸಂದರ್ಭದಲ್ಲಿ ಕಾಲು ಜಾರಿ ಕಾಲುವೆಗೆ ಬಿದ್ದು ಯುವಕ ದಾರುಣ… ನಂಜನಗೂಡು: ಭಗೀರಥ ಹಾಗೂ ಕನಕ ಸಮುದಾಯ ಭವನಕ್ಕೆ ಶಾಸಕರಿಂದ ಭೂಮಿ ಪೂಜೆ

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಆಕ್ಷೇಪಾರ್ಹ ಕಮೆಂಟ್: ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಔಟ್; ಉಗ್ರಪ್ಪಗೆ ನೋಟಿಸ್ 

13/10/2021, 21:23

ಬೆಂಗಳೂರು(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುರಿತು ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ.ಸಲೀಂ ಅವರು ಪಕ್ಷದ ಇನ್ನೊಬ್ಬ ನಾಯಕ ವಿ.ಎಸ್. ಉಗ್ರಪ್ಪ ಅವರ ಜತೆಖಾಸಗಿ ಆಕ್ಷೇಪಾರ್ಹ ಮಾತುಕತೆ ನಡೆಸಿದ ಪ್ರಕರಣ ಪಕ್ಷದೊಳಗೆ ತೀವ್ರ ಸಂಚಲನ ಮೂಡಿಸಿದೆ.

ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷ ಡಾ.ಕೆ.ರಹ್ಮಾನ್ ಖಾನ್ ಅವರು ಎಂ.ಎ.ಸಲೀಂ ಅವರನ್ನು 6 ವರ್ಷಗಳ ಕಾಲ ಪಕ್ಷದ ಸದಸ್ಯತ್ವದಿಂದ ಉಚ್ಛಾಟಿಸಿದ್ದಾರೆ. ಈ ನಡುವೆ ಸಂಸದ ವಿ.ಎಸ್.ಉಗ್ರಪ್ಪಗೆ 3 ದಿನಗಳಲ್ಲಿ ಸಮಜಾಯಿಷಿ ನೀಡುವಂತೆ ಸೂಚಿಸಿ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ವಿ.ಎಸ್.ಉಗ್ರಪ್ಪ ಕರೆದಿದ್ದ ಸುದ್ದಿಗೋಷ್ಠಿ ಆರಂಭವಾಗುವುದಕ್ಕೆ ಮುನ್ನ ಸಲೀಂ ಅವರು ಖಾಸಗಿಯಾಗಿ ಉಗ್ರಪ್ಪ ಜತೆ ಗುಪ್ತವಾಗಿ 

ನಡೆಸಿದ ಮಾತುಕತೆ ಮಾಧ್ಯಮಗಳ ಕ್ಯಾಮಾರದಲ್ಲಿ ಸೆರೆಯಾಗಿ ವೈರಲ್ ಆಗಿತ್ತು. 

ಸಲೀಂ ಅಮಾನತು: ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ.ಸಲೀಮ್ ಅವರನ್ನು ತುರ್ತು ಶಿಸ್ತುಪಾಲನಾ ಸಮಿತಿಯ ಸಭೆಯಲ್ಲಿ ಸದಸ್ಯರ ಒಮ್ಮತದ ಅಭಿಪ್ರಾಯದಂತೆ ಬೇಜವಾಬ್ದಾರಿ ನಡವಳಿಕೆಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮುಂದಿನ 6 ವರ್ಷಗಳ ವರೆಗೆ ಉಚ್ಛಾಟಿಸಲಾಗಿದೆ ಎಂದು ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ.ರಹ್ಮಾನ್‍ಖಾನ್ ತಿಳಿಸಿದ್ದಾರೆ.

ಉಗ್ರಪ್ಪಗೆ ಶೋಕಾಸ್ ನೋಟಿಸ್: ತಾವು ಈ ಸಂದರ್ಭದಲ್ಲಿ ಮಾತನಾಡಿಕೊಂಡಿರುವ ವಿಚಾರಗಳು ಆಧಾರ ರಹಿತವಾಗಿದ್ದು, ಕಾಂಗ್ರೆಸ್ ಪಕ್ಷವು ಇದನ್ನು ಸಂಪೂರ್ಣವಾಗಿ ಖಂಡಿಸುತ್ತದೆ ಮತ್ತು ನಿರಾಕರಿಸುತ್ತದೆ. ಈ ಹಿನ್ನೆಲೆಯಲ್ಲಿ ತಾವು ತಮ್ಮ ಈ ಮೇಲಿನ ನಡವಳಿಕೆಯ ಬಗ್ಗೆ ತಕ್ಷಣ ಸಮಜಾಯಿಷಿಯನ್ನು ಮೂರು ದಿನಗಳ ಒಳಗಾಗಿ ನೀಡಬೇಕು ಎಂದು ಉಗ್ರಪ್ಪಗೆ ರಹ್ಮಾನ್ ಖಾನ್ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು