3:39 PM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಆಕ್ಷೇಪಾರ್ಹ ಕಮೆಂಟ್: ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಔಟ್; ಉಗ್ರಪ್ಪಗೆ ನೋಟಿಸ್ 

13/10/2021, 21:23

ಬೆಂಗಳೂರು(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುರಿತು ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ.ಸಲೀಂ ಅವರು ಪಕ್ಷದ ಇನ್ನೊಬ್ಬ ನಾಯಕ ವಿ.ಎಸ್. ಉಗ್ರಪ್ಪ ಅವರ ಜತೆಖಾಸಗಿ ಆಕ್ಷೇಪಾರ್ಹ ಮಾತುಕತೆ ನಡೆಸಿದ ಪ್ರಕರಣ ಪಕ್ಷದೊಳಗೆ ತೀವ್ರ ಸಂಚಲನ ಮೂಡಿಸಿದೆ.

ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷ ಡಾ.ಕೆ.ರಹ್ಮಾನ್ ಖಾನ್ ಅವರು ಎಂ.ಎ.ಸಲೀಂ ಅವರನ್ನು 6 ವರ್ಷಗಳ ಕಾಲ ಪಕ್ಷದ ಸದಸ್ಯತ್ವದಿಂದ ಉಚ್ಛಾಟಿಸಿದ್ದಾರೆ. ಈ ನಡುವೆ ಸಂಸದ ವಿ.ಎಸ್.ಉಗ್ರಪ್ಪಗೆ 3 ದಿನಗಳಲ್ಲಿ ಸಮಜಾಯಿಷಿ ನೀಡುವಂತೆ ಸೂಚಿಸಿ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ವಿ.ಎಸ್.ಉಗ್ರಪ್ಪ ಕರೆದಿದ್ದ ಸುದ್ದಿಗೋಷ್ಠಿ ಆರಂಭವಾಗುವುದಕ್ಕೆ ಮುನ್ನ ಸಲೀಂ ಅವರು ಖಾಸಗಿಯಾಗಿ ಉಗ್ರಪ್ಪ ಜತೆ ಗುಪ್ತವಾಗಿ 

ನಡೆಸಿದ ಮಾತುಕತೆ ಮಾಧ್ಯಮಗಳ ಕ್ಯಾಮಾರದಲ್ಲಿ ಸೆರೆಯಾಗಿ ವೈರಲ್ ಆಗಿತ್ತು. 

ಸಲೀಂ ಅಮಾನತು: ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ.ಸಲೀಮ್ ಅವರನ್ನು ತುರ್ತು ಶಿಸ್ತುಪಾಲನಾ ಸಮಿತಿಯ ಸಭೆಯಲ್ಲಿ ಸದಸ್ಯರ ಒಮ್ಮತದ ಅಭಿಪ್ರಾಯದಂತೆ ಬೇಜವಾಬ್ದಾರಿ ನಡವಳಿಕೆಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮುಂದಿನ 6 ವರ್ಷಗಳ ವರೆಗೆ ಉಚ್ಛಾಟಿಸಲಾಗಿದೆ ಎಂದು ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ.ರಹ್ಮಾನ್‍ಖಾನ್ ತಿಳಿಸಿದ್ದಾರೆ.

ಉಗ್ರಪ್ಪಗೆ ಶೋಕಾಸ್ ನೋಟಿಸ್: ತಾವು ಈ ಸಂದರ್ಭದಲ್ಲಿ ಮಾತನಾಡಿಕೊಂಡಿರುವ ವಿಚಾರಗಳು ಆಧಾರ ರಹಿತವಾಗಿದ್ದು, ಕಾಂಗ್ರೆಸ್ ಪಕ್ಷವು ಇದನ್ನು ಸಂಪೂರ್ಣವಾಗಿ ಖಂಡಿಸುತ್ತದೆ ಮತ್ತು ನಿರಾಕರಿಸುತ್ತದೆ. ಈ ಹಿನ್ನೆಲೆಯಲ್ಲಿ ತಾವು ತಮ್ಮ ಈ ಮೇಲಿನ ನಡವಳಿಕೆಯ ಬಗ್ಗೆ ತಕ್ಷಣ ಸಮಜಾಯಿಷಿಯನ್ನು ಮೂರು ದಿನಗಳ ಒಳಗಾಗಿ ನೀಡಬೇಕು ಎಂದು ಉಗ್ರಪ್ಪಗೆ ರಹ್ಮಾನ್ ಖಾನ್ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು