10:22 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಆಕ್ಷೇಪಾರ್ಹ ಕಮೆಂಟ್: ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಔಟ್; ಉಗ್ರಪ್ಪಗೆ ನೋಟಿಸ್ 

13/10/2021, 21:23

ಬೆಂಗಳೂರು(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುರಿತು ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ.ಸಲೀಂ ಅವರು ಪಕ್ಷದ ಇನ್ನೊಬ್ಬ ನಾಯಕ ವಿ.ಎಸ್. ಉಗ್ರಪ್ಪ ಅವರ ಜತೆಖಾಸಗಿ ಆಕ್ಷೇಪಾರ್ಹ ಮಾತುಕತೆ ನಡೆಸಿದ ಪ್ರಕರಣ ಪಕ್ಷದೊಳಗೆ ತೀವ್ರ ಸಂಚಲನ ಮೂಡಿಸಿದೆ.

ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷ ಡಾ.ಕೆ.ರಹ್ಮಾನ್ ಖಾನ್ ಅವರು ಎಂ.ಎ.ಸಲೀಂ ಅವರನ್ನು 6 ವರ್ಷಗಳ ಕಾಲ ಪಕ್ಷದ ಸದಸ್ಯತ್ವದಿಂದ ಉಚ್ಛಾಟಿಸಿದ್ದಾರೆ. ಈ ನಡುವೆ ಸಂಸದ ವಿ.ಎಸ್.ಉಗ್ರಪ್ಪಗೆ 3 ದಿನಗಳಲ್ಲಿ ಸಮಜಾಯಿಷಿ ನೀಡುವಂತೆ ಸೂಚಿಸಿ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ವಿ.ಎಸ್.ಉಗ್ರಪ್ಪ ಕರೆದಿದ್ದ ಸುದ್ದಿಗೋಷ್ಠಿ ಆರಂಭವಾಗುವುದಕ್ಕೆ ಮುನ್ನ ಸಲೀಂ ಅವರು ಖಾಸಗಿಯಾಗಿ ಉಗ್ರಪ್ಪ ಜತೆ ಗುಪ್ತವಾಗಿ 

ನಡೆಸಿದ ಮಾತುಕತೆ ಮಾಧ್ಯಮಗಳ ಕ್ಯಾಮಾರದಲ್ಲಿ ಸೆರೆಯಾಗಿ ವೈರಲ್ ಆಗಿತ್ತು. 

ಸಲೀಂ ಅಮಾನತು: ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ.ಸಲೀಮ್ ಅವರನ್ನು ತುರ್ತು ಶಿಸ್ತುಪಾಲನಾ ಸಮಿತಿಯ ಸಭೆಯಲ್ಲಿ ಸದಸ್ಯರ ಒಮ್ಮತದ ಅಭಿಪ್ರಾಯದಂತೆ ಬೇಜವಾಬ್ದಾರಿ ನಡವಳಿಕೆಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮುಂದಿನ 6 ವರ್ಷಗಳ ವರೆಗೆ ಉಚ್ಛಾಟಿಸಲಾಗಿದೆ ಎಂದು ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ.ರಹ್ಮಾನ್‍ಖಾನ್ ತಿಳಿಸಿದ್ದಾರೆ.

ಉಗ್ರಪ್ಪಗೆ ಶೋಕಾಸ್ ನೋಟಿಸ್: ತಾವು ಈ ಸಂದರ್ಭದಲ್ಲಿ ಮಾತನಾಡಿಕೊಂಡಿರುವ ವಿಚಾರಗಳು ಆಧಾರ ರಹಿತವಾಗಿದ್ದು, ಕಾಂಗ್ರೆಸ್ ಪಕ್ಷವು ಇದನ್ನು ಸಂಪೂರ್ಣವಾಗಿ ಖಂಡಿಸುತ್ತದೆ ಮತ್ತು ನಿರಾಕರಿಸುತ್ತದೆ. ಈ ಹಿನ್ನೆಲೆಯಲ್ಲಿ ತಾವು ತಮ್ಮ ಈ ಮೇಲಿನ ನಡವಳಿಕೆಯ ಬಗ್ಗೆ ತಕ್ಷಣ ಸಮಜಾಯಿಷಿಯನ್ನು ಮೂರು ದಿನಗಳ ಒಳಗಾಗಿ ನೀಡಬೇಕು ಎಂದು ಉಗ್ರಪ್ಪಗೆ ರಹ್ಮಾನ್ ಖಾನ್ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು