6:34 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಆಕ್ಷೇಪಾರ್ಹ ಕಮೆಂಟ್: ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಔಟ್; ಉಗ್ರಪ್ಪಗೆ ನೋಟಿಸ್ 

13/10/2021, 21:23

ಬೆಂಗಳೂರು(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುರಿತು ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ.ಸಲೀಂ ಅವರು ಪಕ್ಷದ ಇನ್ನೊಬ್ಬ ನಾಯಕ ವಿ.ಎಸ್. ಉಗ್ರಪ್ಪ ಅವರ ಜತೆಖಾಸಗಿ ಆಕ್ಷೇಪಾರ್ಹ ಮಾತುಕತೆ ನಡೆಸಿದ ಪ್ರಕರಣ ಪಕ್ಷದೊಳಗೆ ತೀವ್ರ ಸಂಚಲನ ಮೂಡಿಸಿದೆ.

ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷ ಡಾ.ಕೆ.ರಹ್ಮಾನ್ ಖಾನ್ ಅವರು ಎಂ.ಎ.ಸಲೀಂ ಅವರನ್ನು 6 ವರ್ಷಗಳ ಕಾಲ ಪಕ್ಷದ ಸದಸ್ಯತ್ವದಿಂದ ಉಚ್ಛಾಟಿಸಿದ್ದಾರೆ. ಈ ನಡುವೆ ಸಂಸದ ವಿ.ಎಸ್.ಉಗ್ರಪ್ಪಗೆ 3 ದಿನಗಳಲ್ಲಿ ಸಮಜಾಯಿಷಿ ನೀಡುವಂತೆ ಸೂಚಿಸಿ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ವಿ.ಎಸ್.ಉಗ್ರಪ್ಪ ಕರೆದಿದ್ದ ಸುದ್ದಿಗೋಷ್ಠಿ ಆರಂಭವಾಗುವುದಕ್ಕೆ ಮುನ್ನ ಸಲೀಂ ಅವರು ಖಾಸಗಿಯಾಗಿ ಉಗ್ರಪ್ಪ ಜತೆ ಗುಪ್ತವಾಗಿ 

ನಡೆಸಿದ ಮಾತುಕತೆ ಮಾಧ್ಯಮಗಳ ಕ್ಯಾಮಾರದಲ್ಲಿ ಸೆರೆಯಾಗಿ ವೈರಲ್ ಆಗಿತ್ತು. 

ಸಲೀಂ ಅಮಾನತು: ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ.ಸಲೀಮ್ ಅವರನ್ನು ತುರ್ತು ಶಿಸ್ತುಪಾಲನಾ ಸಮಿತಿಯ ಸಭೆಯಲ್ಲಿ ಸದಸ್ಯರ ಒಮ್ಮತದ ಅಭಿಪ್ರಾಯದಂತೆ ಬೇಜವಾಬ್ದಾರಿ ನಡವಳಿಕೆಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮುಂದಿನ 6 ವರ್ಷಗಳ ವರೆಗೆ ಉಚ್ಛಾಟಿಸಲಾಗಿದೆ ಎಂದು ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ.ರಹ್ಮಾನ್‍ಖಾನ್ ತಿಳಿಸಿದ್ದಾರೆ.

ಉಗ್ರಪ್ಪಗೆ ಶೋಕಾಸ್ ನೋಟಿಸ್: ತಾವು ಈ ಸಂದರ್ಭದಲ್ಲಿ ಮಾತನಾಡಿಕೊಂಡಿರುವ ವಿಚಾರಗಳು ಆಧಾರ ರಹಿತವಾಗಿದ್ದು, ಕಾಂಗ್ರೆಸ್ ಪಕ್ಷವು ಇದನ್ನು ಸಂಪೂರ್ಣವಾಗಿ ಖಂಡಿಸುತ್ತದೆ ಮತ್ತು ನಿರಾಕರಿಸುತ್ತದೆ. ಈ ಹಿನ್ನೆಲೆಯಲ್ಲಿ ತಾವು ತಮ್ಮ ಈ ಮೇಲಿನ ನಡವಳಿಕೆಯ ಬಗ್ಗೆ ತಕ್ಷಣ ಸಮಜಾಯಿಷಿಯನ್ನು ಮೂರು ದಿನಗಳ ಒಳಗಾಗಿ ನೀಡಬೇಕು ಎಂದು ಉಗ್ರಪ್ಪಗೆ ರಹ್ಮಾನ್ ಖಾನ್ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು