11:18 AM Tuesday19 - May 2026
ಬ್ರೇಕಿಂಗ್ ನ್ಯೂಸ್
ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು.

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಆಕ್ಷೇಪಾರ್ಹ ಕಮೆಂಟ್: ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಔಟ್; ಉಗ್ರಪ್ಪಗೆ ನೋಟಿಸ್ 

13/10/2021, 21:23

ಬೆಂಗಳೂರು(reporterkarnataka.com): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುರಿತು ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ.ಸಲೀಂ ಅವರು ಪಕ್ಷದ ಇನ್ನೊಬ್ಬ ನಾಯಕ ವಿ.ಎಸ್. ಉಗ್ರಪ್ಪ ಅವರ ಜತೆಖಾಸಗಿ ಆಕ್ಷೇಪಾರ್ಹ ಮಾತುಕತೆ ನಡೆಸಿದ ಪ್ರಕರಣ ಪಕ್ಷದೊಳಗೆ ತೀವ್ರ ಸಂಚಲನ ಮೂಡಿಸಿದೆ.

ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯ ಅಧ್ಯಕ್ಷ ಡಾ.ಕೆ.ರಹ್ಮಾನ್ ಖಾನ್ ಅವರು ಎಂ.ಎ.ಸಲೀಂ ಅವರನ್ನು 6 ವರ್ಷಗಳ ಕಾಲ ಪಕ್ಷದ ಸದಸ್ಯತ್ವದಿಂದ ಉಚ್ಛಾಟಿಸಿದ್ದಾರೆ. ಈ ನಡುವೆ ಸಂಸದ ವಿ.ಎಸ್.ಉಗ್ರಪ್ಪಗೆ 3 ದಿನಗಳಲ್ಲಿ ಸಮಜಾಯಿಷಿ ನೀಡುವಂತೆ ಸೂಚಿಸಿ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ವಿ.ಎಸ್.ಉಗ್ರಪ್ಪ ಕರೆದಿದ್ದ ಸುದ್ದಿಗೋಷ್ಠಿ ಆರಂಭವಾಗುವುದಕ್ಕೆ ಮುನ್ನ ಸಲೀಂ ಅವರು ಖಾಸಗಿಯಾಗಿ ಉಗ್ರಪ್ಪ ಜತೆ ಗುಪ್ತವಾಗಿ 

ನಡೆಸಿದ ಮಾತುಕತೆ ಮಾಧ್ಯಮಗಳ ಕ್ಯಾಮಾರದಲ್ಲಿ ಸೆರೆಯಾಗಿ ವೈರಲ್ ಆಗಿತ್ತು. 

ಸಲೀಂ ಅಮಾನತು: ಕೆಪಿಸಿಸಿ ಮಾಧ್ಯಮ ಸಂಯೋಜಕ ಎಂ.ಎ.ಸಲೀಮ್ ಅವರನ್ನು ತುರ್ತು ಶಿಸ್ತುಪಾಲನಾ ಸಮಿತಿಯ ಸಭೆಯಲ್ಲಿ ಸದಸ್ಯರ ಒಮ್ಮತದ ಅಭಿಪ್ರಾಯದಂತೆ ಬೇಜವಾಬ್ದಾರಿ ನಡವಳಿಕೆಗಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಮುಂದಿನ 6 ವರ್ಷಗಳ ವರೆಗೆ ಉಚ್ಛಾಟಿಸಲಾಗಿದೆ ಎಂದು ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಡಾ.ಕೆ.ರಹ್ಮಾನ್‍ಖಾನ್ ತಿಳಿಸಿದ್ದಾರೆ.

ಉಗ್ರಪ್ಪಗೆ ಶೋಕಾಸ್ ನೋಟಿಸ್: ತಾವು ಈ ಸಂದರ್ಭದಲ್ಲಿ ಮಾತನಾಡಿಕೊಂಡಿರುವ ವಿಚಾರಗಳು ಆಧಾರ ರಹಿತವಾಗಿದ್ದು, ಕಾಂಗ್ರೆಸ್ ಪಕ್ಷವು ಇದನ್ನು ಸಂಪೂರ್ಣವಾಗಿ ಖಂಡಿಸುತ್ತದೆ ಮತ್ತು ನಿರಾಕರಿಸುತ್ತದೆ. ಈ ಹಿನ್ನೆಲೆಯಲ್ಲಿ ತಾವು ತಮ್ಮ ಈ ಮೇಲಿನ ನಡವಳಿಕೆಯ ಬಗ್ಗೆ ತಕ್ಷಣ ಸಮಜಾಯಿಷಿಯನ್ನು ಮೂರು ದಿನಗಳ ಒಳಗಾಗಿ ನೀಡಬೇಕು ಎಂದು ಉಗ್ರಪ್ಪಗೆ ರಹ್ಮಾನ್ ಖಾನ್ ಸೂಚಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು