3:53 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಗ್ ರಿಲೀಫ್: ದೆಹಲಿ ಕೋರ್ಟ್​ನಿಂದ ಜಾಮೀನು ಮಂಜೂರು

02/08/2022, 20:56

ಹೊಸದಿಲ್ಲಿ(reporterkarnataka.com): ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಷರತ್ತುಬದ್ಧ ಜಾಮೀನು ನೀಡಿದೆ. ಇದರೊಂದಿಗೆ ಡಿಕೆಶಿಗೆ ಬಿಗ್ ರಿಲೀಫ್ ದೊರೆತಿದೆ.

2018ರಲ್ಲಿ ದೆಹಲಿಯ ಸಪ್ತರ್​ ಜಂಗ್ ಫ್ಲ್ಯಾಟ್​​ನಲ್ಲಿ​ ಸಿಕ್ಕ 8.5 ಕೋಟಿ ರೂಪಾಯಿಗೆ ಸಂಬಂಧಿಸಿದಂತೆ ಹಣದ ಅಕ್ರಮ ವರ್ಗಾವಣೆ ಮಾಡಿರುವ ಆರೋಪ ಶಿವಕುಮಾರ್ ಸೇರಿದಂತೆ ಅವರ ಆಪ್ತರಾದ ಆಂಜನೇಯ ಹನುಮಂತಯ್ಯ, ಸಚಿನ್ ನಾರಾಯಣ, ಸುನಿಲ್ ಶರ್ಮ ಮತ್ತು ರಾಜೇಂದ್ರ ಅವರ ಮೇಲಿತ್ತು. 

ಇದೀಗ ಎಲ್ಲರಿಗೂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಜಾಮೀನು ನೀಡುವಾಗ ಕೆಲವೊಂದು ಷರತ್ತುಗಳನ್ನು ಕೋರ್ಟ್​ ವಿಧಿಸಿದೆ. ಒಂದು ಲಕ್ಷ ರೂಪಾಯಿಯ ಶ್ಯೂರಿಟಿ ನೀಡುವಂತೆ ಕೋರ್ಟ್​ ಹೇಳಿದೆ. ಜತೆಗೆ ಸಾಕ್ಷ್ಯಗಳನ್ನು ತಿರುಚುವಂತಿಲ್ಲ, ದೇಶದಿಂದ ಹೊರಗೆ ಹೋಗುವಂತಿಲ್ಲ ಎಂದು ನ್ಯಾಯಮೂರ್ತಿ ವಿಕಾಸ್ ಧುಲ್ ನೇತೃತ್ವದ ನ್ಯಾಯಪೀಠ ಸೂಚಿಸಿದೆ.

ಕಳೆದ ಶನಿವಾರ ಈ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡದಂತೆ ಜಾರಿ ನಿರ್ದೇಶನಾಲಯದ ಪರ ವಕೀಲರು ಮನವಿ ಮಾಡಿದ್ದರು. ಆದರೆ ಇದನ್ನು ವಿರೋಧಿಸಿದ್ದ ಆರೋಪಿಗಳ ಪರ ವಕೀಲರು, ಹಲವು ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ಸಿಕ್ಕಿದ ಹಲವು ಉದಾಹರಣೆಗಳು ಇವೆ. ಇ.ಡಿಯಿಂದ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಇನ್ನು ಆರೋಪಿಗಳನ್ನು ಬಂಧಿಸುವ ಅಗತ್ಯವೇ ಬರುವುದಿಲ್ಲ. ಇಡಿ ತನಿಖೆಯ ವೇಳೆ ಆರೋಪಿಗಳನ್ನು ಬಂಧಿಸಿಲ್ಲ. ಹೀಗಾಗಿ ಜಾರ್ಜ್ ಶೀಟ್ ಸಲ್ಲಿಕೆ ಬಳಿಕ ಜಾಮೀನು ಪಡೆಯಲು ವಿರೋಧಿಸುವಂತಿಲ್ಲ ಎಂದು ವಾದಿಸಿತ್ತು. ಈ ವಾದವನ್ನು ಕೋರ್ಟ್​ ಮಾನ್ಯ ಮಾಡಿದೆ.

ಏನಿದು ವಿವಾದ..?: 2018ರಲ್ಲಿ ದೆಹಲಿಯ ಸಪ್ತರ್​ ಜಂಗ್ ಫ್ಲ್ಯಾಟ್​​ನಲ್ಲಿ​ ಎಂಟೂವರೆ ಕೋಟಿ ರೂಪಾಯಿ ಹಣ ಸಿಕ್ಕಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ಹಾಗೂ ಇತರರ ವಿರುದ್ಧ ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಡಿಕೆಶಿ ಅವರು 800 ಕಡೆ ಬೇನಾಮಿ ಆಸ್ತಿ ಮಾಡಿದ್ದಾರೆ. ಕುಟುಂಬಸ್ಥರ ಹೆಸರಲ್ಲಿ 200 ಕೋಟಿ ಠೇವಣಿ ಇದೆ. 20ಕ್ಕೂ ಹೆಚ್ಚು ಬ್ಯಾಂಕ್​ಗಳಲ್ಲಿ 317ಕ್ಕೂ ಹೆಚ್ಚು ಅಕೌಂಟ್​ನಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ. ಮಗಳ ಹೆಸರಲ್ಲಿ 108 ಕೋಟಿ ಅಕ್ರಮ ವ್ಯವಹಾರ ಮಾಡಿದ್ದಾರೆ. ಪುತ್ರಿ ಹೆಸರಲ್ಲಿ 48 ಕೋಟಿ ಸಾಲ ಇದೆ. ಆದರೆ ಸಾಲದ ಮೂಲ ಮತ್ತು ಹಣದ ಮೂಲವನ್ನ ತಿಳಿಸಿಲ್ಲ. ದೆಹಲಿಯಲ್ಲಿ ಸಿಕ್ಕಂತಹ 8.5 ಕೋಟಿ ಹಣಕ್ಕೂ ಲೆಕ್ಕ ಕೊಟ್ಟಿಲ್ಲ. ಎಂಬ ಆರೋಪ ಡಿಕೆಶಿ ಮೇಲೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು