1:41 PM Saturday29 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಗ್ ರಿಲೀಫ್: ದೆಹಲಿ ಕೋರ್ಟ್​ನಿಂದ ಜಾಮೀನು ಮಂಜೂರು

02/08/2022, 20:56

ಹೊಸದಿಲ್ಲಿ(reporterkarnataka.com): ಹಣದ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಷರತ್ತುಬದ್ಧ ಜಾಮೀನು ನೀಡಿದೆ. ಇದರೊಂದಿಗೆ ಡಿಕೆಶಿಗೆ ಬಿಗ್ ರಿಲೀಫ್ ದೊರೆತಿದೆ.

2018ರಲ್ಲಿ ದೆಹಲಿಯ ಸಪ್ತರ್​ ಜಂಗ್ ಫ್ಲ್ಯಾಟ್​​ನಲ್ಲಿ​ ಸಿಕ್ಕ 8.5 ಕೋಟಿ ರೂಪಾಯಿಗೆ ಸಂಬಂಧಿಸಿದಂತೆ ಹಣದ ಅಕ್ರಮ ವರ್ಗಾವಣೆ ಮಾಡಿರುವ ಆರೋಪ ಶಿವಕುಮಾರ್ ಸೇರಿದಂತೆ ಅವರ ಆಪ್ತರಾದ ಆಂಜನೇಯ ಹನುಮಂತಯ್ಯ, ಸಚಿನ್ ನಾರಾಯಣ, ಸುನಿಲ್ ಶರ್ಮ ಮತ್ತು ರಾಜೇಂದ್ರ ಅವರ ಮೇಲಿತ್ತು. 

ಇದೀಗ ಎಲ್ಲರಿಗೂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಜಾಮೀನು ನೀಡುವಾಗ ಕೆಲವೊಂದು ಷರತ್ತುಗಳನ್ನು ಕೋರ್ಟ್​ ವಿಧಿಸಿದೆ. ಒಂದು ಲಕ್ಷ ರೂಪಾಯಿಯ ಶ್ಯೂರಿಟಿ ನೀಡುವಂತೆ ಕೋರ್ಟ್​ ಹೇಳಿದೆ. ಜತೆಗೆ ಸಾಕ್ಷ್ಯಗಳನ್ನು ತಿರುಚುವಂತಿಲ್ಲ, ದೇಶದಿಂದ ಹೊರಗೆ ಹೋಗುವಂತಿಲ್ಲ ಎಂದು ನ್ಯಾಯಮೂರ್ತಿ ವಿಕಾಸ್ ಧುಲ್ ನೇತೃತ್ವದ ನ್ಯಾಯಪೀಠ ಸೂಚಿಸಿದೆ.

ಕಳೆದ ಶನಿವಾರ ಈ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡದಂತೆ ಜಾರಿ ನಿರ್ದೇಶನಾಲಯದ ಪರ ವಕೀಲರು ಮನವಿ ಮಾಡಿದ್ದರು. ಆದರೆ ಇದನ್ನು ವಿರೋಧಿಸಿದ್ದ ಆರೋಪಿಗಳ ಪರ ವಕೀಲರು, ಹಲವು ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ಸಿಕ್ಕಿದ ಹಲವು ಉದಾಹರಣೆಗಳು ಇವೆ. ಇ.ಡಿಯಿಂದ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಇನ್ನು ಆರೋಪಿಗಳನ್ನು ಬಂಧಿಸುವ ಅಗತ್ಯವೇ ಬರುವುದಿಲ್ಲ. ಇಡಿ ತನಿಖೆಯ ವೇಳೆ ಆರೋಪಿಗಳನ್ನು ಬಂಧಿಸಿಲ್ಲ. ಹೀಗಾಗಿ ಜಾರ್ಜ್ ಶೀಟ್ ಸಲ್ಲಿಕೆ ಬಳಿಕ ಜಾಮೀನು ಪಡೆಯಲು ವಿರೋಧಿಸುವಂತಿಲ್ಲ ಎಂದು ವಾದಿಸಿತ್ತು. ಈ ವಾದವನ್ನು ಕೋರ್ಟ್​ ಮಾನ್ಯ ಮಾಡಿದೆ.

ಏನಿದು ವಿವಾದ..?: 2018ರಲ್ಲಿ ದೆಹಲಿಯ ಸಪ್ತರ್​ ಜಂಗ್ ಫ್ಲ್ಯಾಟ್​​ನಲ್ಲಿ​ ಎಂಟೂವರೆ ಕೋಟಿ ರೂಪಾಯಿ ಹಣ ಸಿಕ್ಕಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ಹಾಗೂ ಇತರರ ವಿರುದ್ಧ ಇಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಡಿಕೆಶಿ ಅವರು 800 ಕಡೆ ಬೇನಾಮಿ ಆಸ್ತಿ ಮಾಡಿದ್ದಾರೆ. ಕುಟುಂಬಸ್ಥರ ಹೆಸರಲ್ಲಿ 200 ಕೋಟಿ ಠೇವಣಿ ಇದೆ. 20ಕ್ಕೂ ಹೆಚ್ಚು ಬ್ಯಾಂಕ್​ಗಳಲ್ಲಿ 317ಕ್ಕೂ ಹೆಚ್ಚು ಅಕೌಂಟ್​ನಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ. ಮಗಳ ಹೆಸರಲ್ಲಿ 108 ಕೋಟಿ ಅಕ್ರಮ ವ್ಯವಹಾರ ಮಾಡಿದ್ದಾರೆ. ಪುತ್ರಿ ಹೆಸರಲ್ಲಿ 48 ಕೋಟಿ ಸಾಲ ಇದೆ. ಆದರೆ ಸಾಲದ ಮೂಲ ಮತ್ತು ಹಣದ ಮೂಲವನ್ನ ತಿಳಿಸಿಲ್ಲ. ದೆಹಲಿಯಲ್ಲಿ ಸಿಕ್ಕಂತಹ 8.5 ಕೋಟಿ ಹಣಕ್ಕೂ ಲೆಕ್ಕ ಕೊಟ್ಟಿಲ್ಲ. ಎಂಬ ಆರೋಪ ಡಿಕೆಶಿ ಮೇಲೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು