9:57 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷ ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯುತ್ತಿದ್ದರು: ಸಿ.ಟಿ. ರವಿ ವ್ಯಂಗ್ಯ

02/10/2022, 15:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತುಂಬಾ ಚೆನ್ನಾಗಿ ನಟನೆ ಮಾಡ್ತಾರೆ. ಬಣ್ಣ ಹಾಕದೇ, ಗ್ಲಿಸರಿನ್ ಹಾಕದೇ ಕಣ್ಣೀರು ಹಾಕುವ ನಟನೆ ಅವರಿಗೆ ಒಲಿದು ಬಂದಿದೆ. ಈ ನಟನೆ ಅವರಿಗೆ ಬೈ ಬರ್ತ್ ಬಂದಿದೆ. ಡಿಕೆಶಿ ನಟನಾಗಿದ್ದರೆ ಆಸ್ಕರ್ ಪ್ರಶಸ್ತಿ ಪಡೆಯಬಹುದಾಗಿತ್ತು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ವ್ಯಂಗ್ಯವಾಡಿದರು.

ಭಾರತ್ ಜೋಡೋ ಯಾತ್ರೆಯಲ್ಲಿ ಡಿಕೆಶಿ ಕಣ್ಣೀರಿಗೆ ಹಾಕಿದ ಬಗ್ಗೆ ಮಾಧ್ಯಮ ಜತೆ ಪ್ರಸ್ತಾಪಿಸಿದ ಸಿ.ಟಿ.ರವಿ, ಡಿಕೆಶಿ ಒಳಗಡೆ ಇಂತಹ ಕಲಾವಿದ ಇದ್ದನೆಂದು ನಾನು ಅಂದುಕೊಂಡಿರಲಿಲ್ಲ ಎಂದು ಲೇವಡಿ ಮಾಡಿದರು.

ಬೈ ಮಿಸ್ಟೇಕ್ ಅವರು ರಾಜಕೀಯಕ್ಕೆ ಬಂದು ಬಿಟ್ಟಿದ್ದಾರೆ.ಶಿವಕುಮಾರ್ ಅವರಿಗೆ ಹೀರೋ ಆಗುವ ವಯಸ್ಸು ಮುಗಿದು ಹೋಗಿದೆ. ವಿಲನ್ ಆಗೋಕೂ ತಾಕತ್ತು ಇಲ್ಲದಂತಾಗಿದೆ. ಆದರೆ, ಪ್ರಯತ್ನಪಟ್ಟರೆ ನಟನಾಗೋಕೆ ಪೋಷಕ ಪಾತ್ರಗಳು ಸಿಗುತ್ತದೆ ಎಂದು ಅವರು ನುಡಿದರು.

ಕಾಂತಾರ ಸಿನಿಮಾದಲ್ಲಿ ರಿಷಬ್ ಶೆಟ್ಟಿಗೆ ಕಾಂಪಿಟೇಟರ್ ಹುಟ್ಕೊಂಡಿದ್ದಾರೆ. ರಿಷಬ್ ಶೆಟ್ಟಿಗೂ ಅವಕಾಶ ಸಿಗದಂತೆ ಡಿಕೆಶಿ ಮಾಡಿದ್ದಾರೆ. ಇನ್ನು ಮುಂದೆ ಪ್ರಶಸ್ತಿ ಏನಿದ್ರೂ ಡಿಕೆಶಿ ಪಾಲಿಗೆ. ಸಿನಿಮಾದಲ್ಲಿ ನಟಿಸಲು ಡಿ.ಕೆ. ಶಿವಕುಮಾರ್ ಟ್ರೈ ಮಾಡೋದು ಒಳ್ಳೆಯದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು