4:16 AM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷರಿಂದ ಏಟು ತಿಂದಿದ್ದು ಕಾಂಗ್ರೆಸ್ ಅಭಿಮಾನಿಯಲ್ಲ, ಜನತಾ ದಳದ ಕಾರ್ಯಕರ್ತ !!: ಏನು ವಿಚಿತ್ರ ನೋಡಿ! 

12/07/2021, 11:05

ಮಂಡ್ಯ(reporterkarnataka news): ಅವರ ಹೆಸರು ಉಮೇಶ್ ಮದ್ದೂರು. ಜೆಡಿಎಸ್ ಕಾರ್ಯಕರ್ತರು. ತೊರೆಬೊಮ್ಮನ ಹಳ್ಳಿ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷರೂ ಹೌದು.

ಉಮೇಶ್ ಬಗ್ಗೆ ಯಾಕಿಷ್ಟು ವಿವರ ಅಂತ ಅಂದುಕೊಂಡ್ರಾ…? ಕಾರಣ ಇದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕೈಯಿಂದ ಏಟು ತಿಂದವರು ಇದೇ ಉಮೇಶ್ ಮದ್ದೂರು.

ಹಾಗಾದರೆ ಜೆಡಿಎಸ್ ಕಾರ್ಯಕರ್ತರಾದ ಉಮೇಶ್ ಅವರು ಕಾಂಗ್ರೆಸ್ ಅಧ್ಯಕ್ಷರ ಜತೆ ಆ ಸಣ್ಣ ಮೆರವಣಿಗೆಯಲ್ಲಿ ಯಾಕೆ ಸೇರ್ಕೊಂಡರು? ಯಾಕೆ ಹೊಡೆಸಿಕೊಂಡ್ರು? ಎನ್ನುವ ಕುತೂಹಲ ನಿಮಗಿದೆಯೇ? ಹಾಗಾದರೆ ಉಮೇಶ್ ಮದ್ದೂರು ಅವರ ಬಾಯಿಯಲ್ಲೇ ಏನಾಯಿತು ಅನ್ನುವುದನ್ನು

ಕೇಳೋಣ ಬನ್ನಿ….

ನಾನು ನಮ್ಮ ಒಕ್ಕಲಿಗರ ನಾಯಕ ಬರುತ್ತಿದ್ದಾರೆ ಎಂಬ ಅಭಿಮಾನದಿಂದ ಹೋಗಿದ್ದೆ. ಫೋಟೋ ತೆಗೆದುಕೊಳ್ಳಬೇಕೆಂದು ಹತ್ತಿರ ಹೋದೆ. ಹೆಗಲ ಮೇಲೆ ಕೈಹಾಕುವಷ್ಟು ಸಣ್ಣತನ ನನ್ನಲ್ಲಿ ಇರಲಿಲ್ಲ. ನಾನೊಬ್ಬ ಪ್ರಜ್ಞಾವಂತ ವ್ಯಕ್ತಿ ಎನ್ನುತ್ತಾರೆ ಉಮೇಶ್ ಮದ್ದೂರು.

ಸಾಕಷ್ಟು ನೊಂದುಕೊಂಡಿರುವ ಉಮೇಶ್ ಮತ್ತೆ ಮಾತು ಮುಂದುವರಿಸುತ್ತಾರೆ. ಶಿವಕುಮಾರ್ ಅವರು ನನಗೆ ಸಂಬಂಧಿಕರೂ ಆಗಬೇಕು. ಬೇರೆ ಯಾರಾದರೂ ನನ್ನ ಮೇಲೆ ಕೈ ಮಾಡುತ್ತಿದ್ದರೆ ನಾನು ಅಲ್ಲೇ ಪ್ರತಿಭಟನೆ ಮಾಡುತ್ತಿದ್ದೆ. ಅವರ ಸ್ಥಾನಮಾನಕ್ಕೆ ಗೌರವ ಕೊಟ್ಟು ಸುಮ್ಮನಾಗಿದ್ದೇನೆ. ಶಿವಕುಮಾರ್ ಅವರು ಇನ್ನಾದರೂ ಇಂತಹ ವರ್ತನೆ ಬಿಡಬೇಕು ಎಂದು ಬುದ್ದಿವಾದದ ಮಾತನ್ನು ಬಹಳ ನಯವಾಗಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು