8:10 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷರಿಂದ ಏಟು ತಿಂದಿದ್ದು ಕಾಂಗ್ರೆಸ್ ಅಭಿಮಾನಿಯಲ್ಲ, ಜನತಾ ದಳದ ಕಾರ್ಯಕರ್ತ !!: ಏನು ವಿಚಿತ್ರ ನೋಡಿ! 

12/07/2021, 11:05

ಮಂಡ್ಯ(reporterkarnataka news): ಅವರ ಹೆಸರು ಉಮೇಶ್ ಮದ್ದೂರು. ಜೆಡಿಎಸ್ ಕಾರ್ಯಕರ್ತರು. ತೊರೆಬೊಮ್ಮನ ಹಳ್ಳಿ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷರೂ ಹೌದು.

ಉಮೇಶ್ ಬಗ್ಗೆ ಯಾಕಿಷ್ಟು ವಿವರ ಅಂತ ಅಂದುಕೊಂಡ್ರಾ…? ಕಾರಣ ಇದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕೈಯಿಂದ ಏಟು ತಿಂದವರು ಇದೇ ಉಮೇಶ್ ಮದ್ದೂರು.

ಹಾಗಾದರೆ ಜೆಡಿಎಸ್ ಕಾರ್ಯಕರ್ತರಾದ ಉಮೇಶ್ ಅವರು ಕಾಂಗ್ರೆಸ್ ಅಧ್ಯಕ್ಷರ ಜತೆ ಆ ಸಣ್ಣ ಮೆರವಣಿಗೆಯಲ್ಲಿ ಯಾಕೆ ಸೇರ್ಕೊಂಡರು? ಯಾಕೆ ಹೊಡೆಸಿಕೊಂಡ್ರು? ಎನ್ನುವ ಕುತೂಹಲ ನಿಮಗಿದೆಯೇ? ಹಾಗಾದರೆ ಉಮೇಶ್ ಮದ್ದೂರು ಅವರ ಬಾಯಿಯಲ್ಲೇ ಏನಾಯಿತು ಅನ್ನುವುದನ್ನು

ಕೇಳೋಣ ಬನ್ನಿ….

ನಾನು ನಮ್ಮ ಒಕ್ಕಲಿಗರ ನಾಯಕ ಬರುತ್ತಿದ್ದಾರೆ ಎಂಬ ಅಭಿಮಾನದಿಂದ ಹೋಗಿದ್ದೆ. ಫೋಟೋ ತೆಗೆದುಕೊಳ್ಳಬೇಕೆಂದು ಹತ್ತಿರ ಹೋದೆ. ಹೆಗಲ ಮೇಲೆ ಕೈಹಾಕುವಷ್ಟು ಸಣ್ಣತನ ನನ್ನಲ್ಲಿ ಇರಲಿಲ್ಲ. ನಾನೊಬ್ಬ ಪ್ರಜ್ಞಾವಂತ ವ್ಯಕ್ತಿ ಎನ್ನುತ್ತಾರೆ ಉಮೇಶ್ ಮದ್ದೂರು.

ಸಾಕಷ್ಟು ನೊಂದುಕೊಂಡಿರುವ ಉಮೇಶ್ ಮತ್ತೆ ಮಾತು ಮುಂದುವರಿಸುತ್ತಾರೆ. ಶಿವಕುಮಾರ್ ಅವರು ನನಗೆ ಸಂಬಂಧಿಕರೂ ಆಗಬೇಕು. ಬೇರೆ ಯಾರಾದರೂ ನನ್ನ ಮೇಲೆ ಕೈ ಮಾಡುತ್ತಿದ್ದರೆ ನಾನು ಅಲ್ಲೇ ಪ್ರತಿಭಟನೆ ಮಾಡುತ್ತಿದ್ದೆ. ಅವರ ಸ್ಥಾನಮಾನಕ್ಕೆ ಗೌರವ ಕೊಟ್ಟು ಸುಮ್ಮನಾಗಿದ್ದೇನೆ. ಶಿವಕುಮಾರ್ ಅವರು ಇನ್ನಾದರೂ ಇಂತಹ ವರ್ತನೆ ಬಿಡಬೇಕು ಎಂದು ಬುದ್ದಿವಾದದ ಮಾತನ್ನು ಬಹಳ ನಯವಾಗಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು