6:59 AM Tuesday21 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ…

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷರಿಂದ ಏಟು ತಿಂದಿದ್ದು ಕಾಂಗ್ರೆಸ್ ಅಭಿಮಾನಿಯಲ್ಲ, ಜನತಾ ದಳದ ಕಾರ್ಯಕರ್ತ !!: ಏನು ವಿಚಿತ್ರ ನೋಡಿ! 

12/07/2021, 11:05

ಮಂಡ್ಯ(reporterkarnataka news): ಅವರ ಹೆಸರು ಉಮೇಶ್ ಮದ್ದೂರು. ಜೆಡಿಎಸ್ ಕಾರ್ಯಕರ್ತರು. ತೊರೆಬೊಮ್ಮನ ಹಳ್ಳಿ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷರೂ ಹೌದು.

ಉಮೇಶ್ ಬಗ್ಗೆ ಯಾಕಿಷ್ಟು ವಿವರ ಅಂತ ಅಂದುಕೊಂಡ್ರಾ…? ಕಾರಣ ಇದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕೈಯಿಂದ ಏಟು ತಿಂದವರು ಇದೇ ಉಮೇಶ್ ಮದ್ದೂರು.

ಹಾಗಾದರೆ ಜೆಡಿಎಸ್ ಕಾರ್ಯಕರ್ತರಾದ ಉಮೇಶ್ ಅವರು ಕಾಂಗ್ರೆಸ್ ಅಧ್ಯಕ್ಷರ ಜತೆ ಆ ಸಣ್ಣ ಮೆರವಣಿಗೆಯಲ್ಲಿ ಯಾಕೆ ಸೇರ್ಕೊಂಡರು? ಯಾಕೆ ಹೊಡೆಸಿಕೊಂಡ್ರು? ಎನ್ನುವ ಕುತೂಹಲ ನಿಮಗಿದೆಯೇ? ಹಾಗಾದರೆ ಉಮೇಶ್ ಮದ್ದೂರು ಅವರ ಬಾಯಿಯಲ್ಲೇ ಏನಾಯಿತು ಅನ್ನುವುದನ್ನು

ಕೇಳೋಣ ಬನ್ನಿ….

ನಾನು ನಮ್ಮ ಒಕ್ಕಲಿಗರ ನಾಯಕ ಬರುತ್ತಿದ್ದಾರೆ ಎಂಬ ಅಭಿಮಾನದಿಂದ ಹೋಗಿದ್ದೆ. ಫೋಟೋ ತೆಗೆದುಕೊಳ್ಳಬೇಕೆಂದು ಹತ್ತಿರ ಹೋದೆ. ಹೆಗಲ ಮೇಲೆ ಕೈಹಾಕುವಷ್ಟು ಸಣ್ಣತನ ನನ್ನಲ್ಲಿ ಇರಲಿಲ್ಲ. ನಾನೊಬ್ಬ ಪ್ರಜ್ಞಾವಂತ ವ್ಯಕ್ತಿ ಎನ್ನುತ್ತಾರೆ ಉಮೇಶ್ ಮದ್ದೂರು.

ಸಾಕಷ್ಟು ನೊಂದುಕೊಂಡಿರುವ ಉಮೇಶ್ ಮತ್ತೆ ಮಾತು ಮುಂದುವರಿಸುತ್ತಾರೆ. ಶಿವಕುಮಾರ್ ಅವರು ನನಗೆ ಸಂಬಂಧಿಕರೂ ಆಗಬೇಕು. ಬೇರೆ ಯಾರಾದರೂ ನನ್ನ ಮೇಲೆ ಕೈ ಮಾಡುತ್ತಿದ್ದರೆ ನಾನು ಅಲ್ಲೇ ಪ್ರತಿಭಟನೆ ಮಾಡುತ್ತಿದ್ದೆ. ಅವರ ಸ್ಥಾನಮಾನಕ್ಕೆ ಗೌರವ ಕೊಟ್ಟು ಸುಮ್ಮನಾಗಿದ್ದೇನೆ. ಶಿವಕುಮಾರ್ ಅವರು ಇನ್ನಾದರೂ ಇಂತಹ ವರ್ತನೆ ಬಿಡಬೇಕು ಎಂದು ಬುದ್ದಿವಾದದ ಮಾತನ್ನು ಬಹಳ ನಯವಾಗಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು