3:10 AM Friday5 - June 2026
ಬ್ರೇಕಿಂಗ್ ನ್ಯೂಸ್
ಮುಲಾಜಿಲ್ಲದೇ ಕ್ರಮ ಎಂದ ರಾಗಾ: ರಾಗವೇ ಬದಲಿಸಿ ‘ಐ ಆಯಮ್ ಹ್ಯಾಪಿ’ ಎಂದ… ಯಾವ ಟ್ರಬಲ್ ಶೂಟರೂ ಇಲ್ಲ; ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗ್ಲಿಲ್ಲ:… ಆರೋಗ್ಯ ಕ್ಷೇತ್ರದಲ್ಲಿ ಸಚಿವ ಯು.ಟಿ. ಖಾದರ್ ಹೊಸ ಮೈಲಿಗಲ್ಲು: ವೈದ್ಯರ ನೇರ ನೇಮಕಾತಿಗೆ… ಹೊಸ ರಾಜಕೀಯ ಹಾದಿಯತ್ತ ಅಣ್ಣಾಮಲೈ: ಕರ್ನಾಟಕದ ಸಿಂಗಂನಿಂದ ಹೊಸ ಪಕ್ಷ ಘೋಷಣೆ ತಿತಿಮತಿ | ಕಾಡಾನೆ ದಾಳಿ: ಕಾಫಿ ತೋಟ ವೀಕ್ಷಿಸಲು ಹೋಗಿದ್ದ ಐಜಿ ಪತ್ನಿ… ಚಿಕ್ಕಮಗಳೂರು: ಕರೆದ ಕೂಡಲೇ ಬರಲಿಲ್ಲವೆಂದು ಕೆಫೆ ಕಾರ್ಮಿಕನ ಮೇಲೆ ಹಲ್ಲೆ ಡಿಕೆಶಿ ಸಂಪುಟದ ಖಾತೆ ಹಂಚಿಕೆ: ಖಾದರ್ ಗೆ ಆರೋಗ್ಯ; ಉಳಿದಂತೆ ಯಾರು ಯಾರಿಗೆ… ನಿಜವಾಯ್ತು ಮಿಥನ್ ರೈ ಭವಿಷ್ಯವಾಣಿ!: ಕೊನೆಗೂ ಡಿಕೆಶಿ ಆದ್ರು ಸಿಎಂ!!; ಇದೀಗ ವೀಡಿಯೊ… ಸಾಮೂಹಿಕ ನಾಯಕತ್ವದಲ್ಲೇ ಮುಂದುವರಿಯಿರಿ: ಸಿಎಂ ಡಿಕೆಶಿಗೆ ಹೈಕಮಾಂಡ್‌ ಕಟ್ಟುನಿಟ್ಟಿನ ಸೂಚನೆ ಲೈವ್‌ ಬಂದು ಅಭಿಮಾನಿಗಳಿಗೆ ಬಹುಮುಖ್ಯ ಮಾಹಿತಿ ನೀಡಿದ ನಟ ದರ್ಶನ್‌

ಇತ್ತೀಚಿನ ಸುದ್ದಿ

ಕೆಪಿಸಿಸಿ ಅಧ್ಯಕ್ಷರಿಂದ ಏಟು ತಿಂದಿದ್ದು ಕಾಂಗ್ರೆಸ್ ಅಭಿಮಾನಿಯಲ್ಲ, ಜನತಾ ದಳದ ಕಾರ್ಯಕರ್ತ !!: ಏನು ವಿಚಿತ್ರ ನೋಡಿ! 

12/07/2021, 11:05

ಮಂಡ್ಯ(reporterkarnataka news): ಅವರ ಹೆಸರು ಉಮೇಶ್ ಮದ್ದೂರು. ಜೆಡಿಎಸ್ ಕಾರ್ಯಕರ್ತರು. ತೊರೆಬೊಮ್ಮನ ಹಳ್ಳಿ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಅಧ್ಯಕ್ಷರೂ ಹೌದು.

ಉಮೇಶ್ ಬಗ್ಗೆ ಯಾಕಿಷ್ಟು ವಿವರ ಅಂತ ಅಂದುಕೊಂಡ್ರಾ…? ಕಾರಣ ಇದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕೈಯಿಂದ ಏಟು ತಿಂದವರು ಇದೇ ಉಮೇಶ್ ಮದ್ದೂರು.

ಹಾಗಾದರೆ ಜೆಡಿಎಸ್ ಕಾರ್ಯಕರ್ತರಾದ ಉಮೇಶ್ ಅವರು ಕಾಂಗ್ರೆಸ್ ಅಧ್ಯಕ್ಷರ ಜತೆ ಆ ಸಣ್ಣ ಮೆರವಣಿಗೆಯಲ್ಲಿ ಯಾಕೆ ಸೇರ್ಕೊಂಡರು? ಯಾಕೆ ಹೊಡೆಸಿಕೊಂಡ್ರು? ಎನ್ನುವ ಕುತೂಹಲ ನಿಮಗಿದೆಯೇ? ಹಾಗಾದರೆ ಉಮೇಶ್ ಮದ್ದೂರು ಅವರ ಬಾಯಿಯಲ್ಲೇ ಏನಾಯಿತು ಅನ್ನುವುದನ್ನು

ಕೇಳೋಣ ಬನ್ನಿ….

ನಾನು ನಮ್ಮ ಒಕ್ಕಲಿಗರ ನಾಯಕ ಬರುತ್ತಿದ್ದಾರೆ ಎಂಬ ಅಭಿಮಾನದಿಂದ ಹೋಗಿದ್ದೆ. ಫೋಟೋ ತೆಗೆದುಕೊಳ್ಳಬೇಕೆಂದು ಹತ್ತಿರ ಹೋದೆ. ಹೆಗಲ ಮೇಲೆ ಕೈಹಾಕುವಷ್ಟು ಸಣ್ಣತನ ನನ್ನಲ್ಲಿ ಇರಲಿಲ್ಲ. ನಾನೊಬ್ಬ ಪ್ರಜ್ಞಾವಂತ ವ್ಯಕ್ತಿ ಎನ್ನುತ್ತಾರೆ ಉಮೇಶ್ ಮದ್ದೂರು.

ಸಾಕಷ್ಟು ನೊಂದುಕೊಂಡಿರುವ ಉಮೇಶ್ ಮತ್ತೆ ಮಾತು ಮುಂದುವರಿಸುತ್ತಾರೆ. ಶಿವಕುಮಾರ್ ಅವರು ನನಗೆ ಸಂಬಂಧಿಕರೂ ಆಗಬೇಕು. ಬೇರೆ ಯಾರಾದರೂ ನನ್ನ ಮೇಲೆ ಕೈ ಮಾಡುತ್ತಿದ್ದರೆ ನಾನು ಅಲ್ಲೇ ಪ್ರತಿಭಟನೆ ಮಾಡುತ್ತಿದ್ದೆ. ಅವರ ಸ್ಥಾನಮಾನಕ್ಕೆ ಗೌರವ ಕೊಟ್ಟು ಸುಮ್ಮನಾಗಿದ್ದೇನೆ. ಶಿವಕುಮಾರ್ ಅವರು ಇನ್ನಾದರೂ ಇಂತಹ ವರ್ತನೆ ಬಿಡಬೇಕು ಎಂದು ಬುದ್ದಿವಾದದ ಮಾತನ್ನು ಬಹಳ ನಯವಾಗಿ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು