5:12 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಕೆ.ಆರ್.ಪೇಟೆ: ಹದಗೆಟ್ಟ ರಸ್ತೆ ..! ಸಾರ್ವಜನಿಕರು, ಅಂಗಡಿ ಮಾಲೀಕರ ಅಸಮಾಧಾನ

01/02/2025, 09:21

ಮಂಡ್ಯ(reporterkarnataka.com): ಕೆ.ಆರ್.ಪೇಟೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಒಂದಾದ ಹೊಸ ಕಿಕ್ಕೇರಿ ರಸ್ತೆಯಲ್ಲಿ ಕರ್ಣಾಟಕ ಬ್ಯಾಂಕ್, ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ ಸೇರಿದಂತೆ ಹಲವು ವಾಣಿಜ್ಯ ಅಂಗಡಿಗಳನ್ನು ಒಳಗೊಂಡಿದ್ದು ಈ ರಸ್ತೆಯಲ್ಲಿ ದಿನನಿತ್ಯ ಹಳ್ಳಿಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಬ್ಯಾಂಕ್ ವ್ಯವಹಾರಕ್ಕೆ ಆಗಮಿಸುತ್ತಿದ್ದು ಅಲ್ಲಲ್ಲಿ ರಸ್ತೆಗಳು ಗುಂಡಿ ಬಿದ್ದಿದ್ದು ವಾಹನಗಳು ಸಂಚರಿಸಲು ಸಾದ್ಯವಾಗುತ್ತಿಲ್ಲ.


ಈ ಮಾರ್ಗದಲ್ಲಿ ದಿನನಿತ್ಯ ಹಳ್ಳಿಯಿಂದ ಸಾವಿರಾರು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಬರುತ್ತಿದ್ದು ಅಲ್ಲದೇ ಪ್ರಸಿದ್ಧ ಪುಣ್ಯಕ್ಷೇತ್ರವಾದ ಹೇಮಗಿರಿ, ಶ್ರೀ ಚಂದಗೋಳಮ್ಮ ದೇವಾಸ್ಥಾನಕ್ಕೆ ಹೆಚ್ಚು ಭಕ್ತರು ಸಂಚರಿಸುತ್ತಿದ್ದು ಸಾರ್ವಜನಿಕರು ವಾಹನಗಳಲ್ಲಿ ಸಂಚರಿಸಲು ಕಷ್ಟವಾಗಿದ್ದು ಅಂಗಡಿಯ ಮಾಲೀಕರು ಅಲ್ಲಲ್ಲಿ ಕಲ್ಲು-ಮಣ್ಣು ಹಾಕಿದರೂ ಸಹ ದಿನೇ ದಿನೇ ರಸ್ತೆಯಲ್ಲಿ ಗುಂಡಿಗಳು ಹೆಚ್ಚಾಗಿದೆ, ಅಲ್ಲದೇ ಸ್ಥಳೀಯ ಜನಪ್ರತಿನಿಧಿಗಳು ಈ ರಸ್ತೆಯಲ್ಲೇ ಓಡಾಡುತ್ತಿದ್ದು ಯಾವುದೇ ಸಂಬಂಧವಿಲ್ಲದಂತೆ ಇರುವುದು ಬೇಸರದ ಸಂಗತಿ ಎಂದು ಸಾರ್ವಜನಿಕರು, ಅಂಗಡಿ ಮುಂಗಟ್ಟಿನ ಮಾಲೀಕರು ಬೇಸರ ವ್ಯಕ್ತಪಡಿಸಿದ್ದಾರೆ, ಮುಂದಿನ ದಿನಗಳಲ್ಲಾದರೂ ರಸ್ತೆಗಳ ಗುಂಡಿ ಮುಚ್ಚಿ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಮಾಡುತ್ತಾರಾ..? ಕಾದು ನೋಡೋಣ..!

ಇತ್ತೀಚಿನ ಸುದ್ದಿ

ಜಾಹೀರಾತು