10:29 AM Saturday5 - September 2026
ಬ್ರೇಕಿಂಗ್ ನ್ಯೂಸ್
test ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಕೆ.ಆರ್.ಪೇಟೆ: ಹದಗೆಟ್ಟ ರಸ್ತೆ ..! ಸಾರ್ವಜನಿಕರು, ಅಂಗಡಿ ಮಾಲೀಕರ ಅಸಮಾಧಾನ

01/02/2025, 09:21

ಮಂಡ್ಯ(reporterkarnataka.com): ಕೆ.ಆರ್.ಪೇಟೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಒಂದಾದ ಹೊಸ ಕಿಕ್ಕೇರಿ ರಸ್ತೆಯಲ್ಲಿ ಕರ್ಣಾಟಕ ಬ್ಯಾಂಕ್, ಕೆನರಾ ಬ್ಯಾಂಕ್, ಬ್ಯಾಂಕ್ ಆಫ್ ಬರೋಡ ಸೇರಿದಂತೆ ಹಲವು ವಾಣಿಜ್ಯ ಅಂಗಡಿಗಳನ್ನು ಒಳಗೊಂಡಿದ್ದು ಈ ರಸ್ತೆಯಲ್ಲಿ ದಿನನಿತ್ಯ ಹಳ್ಳಿಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಬ್ಯಾಂಕ್ ವ್ಯವಹಾರಕ್ಕೆ ಆಗಮಿಸುತ್ತಿದ್ದು ಅಲ್ಲಲ್ಲಿ ರಸ್ತೆಗಳು ಗುಂಡಿ ಬಿದ್ದಿದ್ದು ವಾಹನಗಳು ಸಂಚರಿಸಲು ಸಾದ್ಯವಾಗುತ್ತಿಲ್ಲ.


ಈ ಮಾರ್ಗದಲ್ಲಿ ದಿನನಿತ್ಯ ಹಳ್ಳಿಯಿಂದ ಸಾವಿರಾರು ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಬರುತ್ತಿದ್ದು ಅಲ್ಲದೇ ಪ್ರಸಿದ್ಧ ಪುಣ್ಯಕ್ಷೇತ್ರವಾದ ಹೇಮಗಿರಿ, ಶ್ರೀ ಚಂದಗೋಳಮ್ಮ ದೇವಾಸ್ಥಾನಕ್ಕೆ ಹೆಚ್ಚು ಭಕ್ತರು ಸಂಚರಿಸುತ್ತಿದ್ದು ಸಾರ್ವಜನಿಕರು ವಾಹನಗಳಲ್ಲಿ ಸಂಚರಿಸಲು ಕಷ್ಟವಾಗಿದ್ದು ಅಂಗಡಿಯ ಮಾಲೀಕರು ಅಲ್ಲಲ್ಲಿ ಕಲ್ಲು-ಮಣ್ಣು ಹಾಕಿದರೂ ಸಹ ದಿನೇ ದಿನೇ ರಸ್ತೆಯಲ್ಲಿ ಗುಂಡಿಗಳು ಹೆಚ್ಚಾಗಿದೆ, ಅಲ್ಲದೇ ಸ್ಥಳೀಯ ಜನಪ್ರತಿನಿಧಿಗಳು ಈ ರಸ್ತೆಯಲ್ಲೇ ಓಡಾಡುತ್ತಿದ್ದು ಯಾವುದೇ ಸಂಬಂಧವಿಲ್ಲದಂತೆ ಇರುವುದು ಬೇಸರದ ಸಂಗತಿ ಎಂದು ಸಾರ್ವಜನಿಕರು, ಅಂಗಡಿ ಮುಂಗಟ್ಟಿನ ಮಾಲೀಕರು ಬೇಸರ ವ್ಯಕ್ತಪಡಿಸಿದ್ದಾರೆ, ಮುಂದಿನ ದಿನಗಳಲ್ಲಾದರೂ ರಸ್ತೆಗಳ ಗುಂಡಿ ಮುಚ್ಚಿ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಮಾಡುತ್ತಾರಾ..? ಕಾದು ನೋಡೋಣ..!

ಇತ್ತೀಚಿನ ಸುದ್ದಿ

ಜಾಹೀರಾತು