11:18 AM Tuesday10 - March 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌… ಕಂಬಳಕ್ಕೆ ರಾಜ್ಯ ಸರಕಾರದಿಂದ ಹಣಕಾಸಿನ ನೆರವು: ಬಂಟ್ವಾಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಜನಾಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ: ಮೈಸೂರಿನಲ್ಲಿ‌ ಸಿಎಂ ಸಿದ್ದರಾಮಯ್ಯ Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು

ಇತ್ತೀಚಿನ ಸುದ್ದಿ

ಕ್ರಮಬದ್ಧವಾದ ಜೀವನ ಶೈಲಿ ಮಧುಮೇಹವನ್ನು ತಡೆಗಟ್ಟ ಬಹುದು: ಡಾ. ನಜೀರ್ ಅಹಮದ್

16/11/2022, 12:22

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಯುವ ರೆಡ್‌ ಕ್ರಾಸ್‌ ಘಟಕ, ಕಲ್ಲಾರೆಯ ಡಯಾಬಿಟಿಸ್ ಸಂಸ್ಥೆ ಹಾಗೂ ಫಾದರ್ ಪತ್ರಾವೋ ಆಸ್ಪತ್ರೆ ಗಳ ಸಂಯುಕ್ತ ಆಶ್ರಯದಲ್ಲಿ ಮಧುಮೇಹ ದಿನದ ಅಂಗವಾಗಿ ಮಧುಮೇಹದ ಬಗ್ಗೆ ಅರಿವು ಮೂಡಿರುವ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಡಯಾಬಿಟಿಸ್‌ ಸೆಂಟರ್‌ನ ವೈದ್ಯ ನಜೀರ್ ಅಹ್ಮದ್ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಮಧುಮೇಹ ಕಾಯಿಲೆಗೊಳಗಾಗುವವರ ಸಂಖ್ಯೆಯು ಗಣನೀಯವಾಗಿ ಹೆಚ್ಚಾಗಿದೆ. ಅಸಮರ್ಪಕ ಜೀವನಶೈಲಿ, ಮಾನಸಿಕ ಒತ್ತಡ ಹಾಗೂ ಅಸಂತುಲಿತ ಆಹಾರ ಮುಂತಾದ ಕಾರಣಗಳಿಂದ ಹೆಚ್ಚಾಗಿ ಡಯಾಬಿಟಿಸ್‌ ಕಂಡು ಬರುತ್ತದೆ. ಕ್ರಮಬದ್ಧ ಜೀವನ ಶೈಲಿ, ನಿಯಮಿತವಾದ ವ್ಯಾಯಾಮ ಮಧುಮೇಹವನ್ನು ನಿಯಂತ್ರಿಸಲು ಸಹಕಾರಿ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ.ಡಾ. ಅಂತೋನಿ ಪ್ರಕಾಶ್ ಮೊಂತೆರೊ ಮಾತನಾಡಿ, ಪ್ರತಿಯೊಬ್ಬ
ವ್ಯಕ್ತಿಗೂ ಡಯಾಬಿಟ‌ನ ಬಗ್ಗೆ ಅರಿವು ಇರಬೇಕು. ನಿಯಮಿತವಾಗಿ ತಪಾಸಣೆಗೊಳಪಟ್ಟರೆ ಡಯಾಬಿಟಿಸ್‌ ಬರುವ ಸಾಧ್ಯತೆಗಳನ್ನು ಕಡಿಮೆ ಮಾಡಬಹುದು. ಅಗತ್ಯ ಮುಂಜಾಗರುಕತಾ ಕ್ರಮಗಳನ್ನು ಕೈಗೊಳ್ಳಿ ಎಂದು ಹೇಳಿದರು.



ಕಾಲೇಜಿನ ಉಪಪ್ರಾಂಶುಪಾಲ, ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕ ಡಾ. ಎ.ಪಿ. ರಾಧಾಕೃಷ್ಣ ಉಪಸ್ಥಿತರಿದ್ದರು.
ಪ್ರೇಮ್ ಮತ್ತು ಬಳಗ ಪ್ರಾರ್ಥಿಸಿದರು, ಡಾ.ಮಾಲಿನಿ ಸ್ವಾಗತಿಸಿ, ನಿರೂಪಿಸಿದರು. ಕಾಲೇಜಿನ ಯುವ ರೆಡ್‌ ಕ್ರಾಸ್ ಘಟಕದ ಸಂಚಾಲಕ ಡಾ. ಡಿಂಪಲ್ ಫೆರ್ನಾಂಡಿಸ್ ವಂದಿಸಿದರು. ಭಾ | ಪತ್ರಾವೋ ಆಸ್ಪತ್ರೆಯ ವತಿಯಿಂದ ವಿದ್ಯಾರ್ಥಿಗಳ ಹಾಗೂ ಕಾಲೇಜು ಸಿಬ್ಬಂದಿಗಳ ಆರೋಗ್ಯ ತಪಾಣಿಯನ್ನು ಮಾಡಲಾಯಿತು. ನಂತರ ಡಾ. ನಜೀರ್ ಅಹ್ಮದ್ ರವರು ಸಮಾಲೋಚನೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು