3:28 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಕ್ರಮಬದ್ಧವಾದ ಜೀವನ ಶೈಲಿ ಮಧುಮೇಹವನ್ನು ತಡೆಗಟ್ಟ ಬಹುದು: ಡಾ. ನಜೀರ್ ಅಹಮದ್

16/11/2022, 12:22

ಪುತ್ತೂರು(reporterkarnataka.com): ಸಂತ ಫಿಲೋಮಿನಾ ಕಾಲೇಜಿನ ಯುವ ರೆಡ್‌ ಕ್ರಾಸ್‌ ಘಟಕ, ಕಲ್ಲಾರೆಯ ಡಯಾಬಿಟಿಸ್ ಸಂಸ್ಥೆ ಹಾಗೂ ಫಾದರ್ ಪತ್ರಾವೋ ಆಸ್ಪತ್ರೆ ಗಳ ಸಂಯುಕ್ತ ಆಶ್ರಯದಲ್ಲಿ ಮಧುಮೇಹ ದಿನದ ಅಂಗವಾಗಿ ಮಧುಮೇಹದ ಬಗ್ಗೆ ಅರಿವು ಮೂಡಿರುವ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಡಯಾಬಿಟಿಸ್‌ ಸೆಂಟರ್‌ನ ವೈದ್ಯ ನಜೀರ್ ಅಹ್ಮದ್ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಮಧುಮೇಹ ಕಾಯಿಲೆಗೊಳಗಾಗುವವರ ಸಂಖ್ಯೆಯು ಗಣನೀಯವಾಗಿ ಹೆಚ್ಚಾಗಿದೆ. ಅಸಮರ್ಪಕ ಜೀವನಶೈಲಿ, ಮಾನಸಿಕ ಒತ್ತಡ ಹಾಗೂ ಅಸಂತುಲಿತ ಆಹಾರ ಮುಂತಾದ ಕಾರಣಗಳಿಂದ ಹೆಚ್ಚಾಗಿ ಡಯಾಬಿಟಿಸ್‌ ಕಂಡು ಬರುತ್ತದೆ. ಕ್ರಮಬದ್ಧ ಜೀವನ ಶೈಲಿ, ನಿಯಮಿತವಾದ ವ್ಯಾಯಾಮ ಮಧುಮೇಹವನ್ನು ನಿಯಂತ್ರಿಸಲು ಸಹಕಾರಿ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ವಂ.ಡಾ. ಅಂತೋನಿ ಪ್ರಕಾಶ್ ಮೊಂತೆರೊ ಮಾತನಾಡಿ, ಪ್ರತಿಯೊಬ್ಬ
ವ್ಯಕ್ತಿಗೂ ಡಯಾಬಿಟ‌ನ ಬಗ್ಗೆ ಅರಿವು ಇರಬೇಕು. ನಿಯಮಿತವಾಗಿ ತಪಾಸಣೆಗೊಳಪಟ್ಟರೆ ಡಯಾಬಿಟಿಸ್‌ ಬರುವ ಸಾಧ್ಯತೆಗಳನ್ನು ಕಡಿಮೆ ಮಾಡಬಹುದು. ಅಗತ್ಯ ಮುಂಜಾಗರುಕತಾ ಕ್ರಮಗಳನ್ನು ಕೈಗೊಳ್ಳಿ ಎಂದು ಹೇಳಿದರು.



ಕಾಲೇಜಿನ ಉಪಪ್ರಾಂಶುಪಾಲ, ಆಂತರಿಕ ಗುಣಮಟ್ಟ ಭರವಸೆ ಕೋಶದ ಸಂಯೋಜಕ ಡಾ. ಎ.ಪಿ. ರಾಧಾಕೃಷ್ಣ ಉಪಸ್ಥಿತರಿದ್ದರು.
ಪ್ರೇಮ್ ಮತ್ತು ಬಳಗ ಪ್ರಾರ್ಥಿಸಿದರು, ಡಾ.ಮಾಲಿನಿ ಸ್ವಾಗತಿಸಿ, ನಿರೂಪಿಸಿದರು. ಕಾಲೇಜಿನ ಯುವ ರೆಡ್‌ ಕ್ರಾಸ್ ಘಟಕದ ಸಂಚಾಲಕ ಡಾ. ಡಿಂಪಲ್ ಫೆರ್ನಾಂಡಿಸ್ ವಂದಿಸಿದರು. ಭಾ | ಪತ್ರಾವೋ ಆಸ್ಪತ್ರೆಯ ವತಿಯಿಂದ ವಿದ್ಯಾರ್ಥಿಗಳ ಹಾಗೂ ಕಾಲೇಜು ಸಿಬ್ಬಂದಿಗಳ ಆರೋಗ್ಯ ತಪಾಣಿಯನ್ನು ಮಾಡಲಾಯಿತು. ನಂತರ ಡಾ. ನಜೀರ್ ಅಹ್ಮದ್ ರವರು ಸಮಾಲೋಚನೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು