8:26 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಕೇಂದ್ರ ಯುವ ಜನ,ಕ್ರೀಡಾ ಇಲಾಖೆಯಿಂದ ಸ್ವಚ್ಛತಾ ಕಾರ್ಯಕ್ರಮ

11/10/2021, 11:13

ಮಂಗಳೂರು (reporterkarnatak.com ): ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಕೇಂದ್ರ ಯುವ ಜನ,  ಕ್ರೀಡಾ ಇಲಾಖೆ, ವತಿಯಿಂದ ಸ್ವಚ್ಛತಾ ಕಾರ್ಯಕ್ರಮವು ನಗರದ ಮಂಗಳಾ ಸ್ಟೇಡಿಯಂ ಹಾಗೂ ಕರಾವಳಿ ಮೈದಾನದಲ್ಲಿ  ಇತ್ತೀಚಿಗೆ ಜರುಗಿತು.

ನೆಹರು ಯುವ ಕೇಂದ್ರದ ಸಮನ್ವಯಧಿಕಾರಿ ರಘು ವೀರ್ ಸೂಟರ್  ಪೇಟೆ ಮಾತನಾಡಿ ಸ್ವಚ್ಛತೆ ಮನೆಮನೆಯಲ್ಲಿ ಪ್ರಾರಂಭವಾಗಬೇಕು ಎಂದರು.

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ. ಎ. ಮಾತನಾಡಿ ಸ್ವಚ್ಛ ಪರಿಸರದಿಂದ ಉತ್ತಮ ಆರೋಗ್ಯದ ಪರಿಕಲ್ಪನೆ ಇದೆ ಎಂದರು.

ಕ್ರೀಡಾ ಇಲಾಖೆಯ ನಿರ್ದೇಶಕ ಪ್ರದೀಪ್ ಡಿ ಸೋಜಾ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಕೆನರಾ ಕಾಲೇಜಿನ ಯೋಜನೆ ಎನ್.ಎಸ್.ಎಸ್ ಯೋಜನಾಧಿಕಾರಿ ಸೀಮಾ ಪ್ರಭು ಉಪಸ್ಥಿತರಿದ್ದರು.




ಸ್ವಚ್ಛತಾ ಕಾರ್ಯದಲ್ಲಿ ಕೆನರಾ ಹಾಗೂ ಬೆಸೆಂಟ್   ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂಸೇವಕರು, ಕ್ರೀಡಾ ಇಲಾಖೆಯ ಕ್ರೀಡಾಳುಗಳು ಹಾಗೂ ಪೋಷಕರು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು