12:21 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಕ್ರೀಡಾ ವರದಿಗಾರಿಕೆ: ಜಗದೀಶ ಅಂಚನ್ ಸೂಟರ್ ಪೇಟೆ ಅವರಿಗೆ ಸಾಧನಾ ರಾಜ್ಯ ವಿಶೇಷ ಪ್ರಶಸ್ತಿ ಪ್ರದಾನ

01/03/2023, 11:12

ಮಂಗಳೂರು(reporterkarnataka.com): ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನ ಮಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಆಶ್ರಯದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ನಾಡು ನುಡಿ ಸಾಹಿತ್ಯ ಸಮ್ಮೇಳನದಲ್ಲಿ ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರಿಗೆ ಕ್ರೀಡಾ ವರದಿಗಾರಿಕೆಗಾಗಿ ನೀಡಿದ ಸಾಧನಾ ರಾಜ್ಯ ವಿಶೇಷ ಪ್ರಶಸ್ತಿಯನ್ನು ಕನ್ನಡ ಸಿನಿಮಾ ರಂಗದ ಹಿರಿಯ ನಟ ದೊಡ್ಡಣ್ಣ ಅವರು ಪ್ರದಾನ ಮಾಡಿದರು.

30 ವರ್ಷಗಳಿಂದ ಕ್ರೀಡಾ ಲೇಖನಗಳ ಮೂಲಕ ವಿವಿಧ ಪತ್ರಿಕೆಗಳಲ್ಲಿ ಗುರುತಿಸಿಕೊಂಡಿರುವ ಇವರು ರಾಜ್ಯ ಹಾಗೂ ಜಿಲ್ಲಾ ಮಟ್ಟದ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು,‌ ಕರಾವಳಿ ಕಾಲೇಜು ಸಮೂಹ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಎಸ್. ಗಣೇಶ ರಾವ್, ಕರ್ಣಾಟಕ ಬ್ಯಾಂಕ್ ಚೇರ್ ಮನ್ ಮಹಾಬಲೇಶ್ವರ ರಾವ್ , ಕಲ್ಕೂರ ಪ್ರತಿಷ್ಠಾನದ ಮುಖ್ಯಸ್ಥ ಪ್ರದೀಪ್ ಕುಮಾರ್ ಕಲ್ಕೂರ, ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಹರೀಶ್ ಸುಲಾಯ ಒಡ್ಡಂಬೆಟ್ಟು , ಹಿರಿಯ ಸಾಹಿತಿ ಇರಾ ನೇಮು ಪೂಜಾರಿ, ಸಾಧನಾ ರಾಷ್ಟ್ರೀಯ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಕಾ.ವೀ. ಕೃಷ್ಣದಾಸ್ , ಸಂಚಾಲಕಿ ಲತಾ ಕೃಷ್ಣದಾಸ್ , ಯುಗಪುರುಷ ಮಾಸ ಪತ್ರಿಕೆ ಸಂಪಾದಕ ಭುವನಾಭಿರಾಮ ಉಡುಪ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು