12:25 PM Sunday20 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಕೃಷ್ಣಾ ನದಿ ಸೇರಿದ 3 ಲಕ್ಷ ಕ್ಯೂಸೆಕ್ ನೀರು: ಅಥಣಿ ತಾಲೂಕಿನಲ್ಲಿ ಭಾರಿ ಪ್ರವಾಹ, ಗುಳೆ ಹೊರಟ ಸಾವಿರಾರು ಗ್ರಾಮಸ್ಥರು 

25/07/2021, 19:09

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾ ಸೇರಿದಂತೆ ಬೆಳಗಾವಿಯ ಎಲ್ಲ ಪ್ರಮುಖ ನದಿಗಳು ತುಂಬಿ ಹರಿಯುತ್ತಿರುವ ಪರಿಣಾಮ ಅಥಣಿ ತಾಲೂಕಿನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿ ತೀರದ ಗ್ರಾಮಗಳಿಗೆ ನೀರು ನುಗ್ಗಿದೆ. ಸಾವಿರಾರು ಮಂದಿ ಗ್ರಾಮಸ್ಥರು ಗುಳೆ ಹೋಗಿದ್ದಾರೆ.

ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 3 ಲಕ್ಷ ಕ್ಯೂಸೆಕ್ ಗೂ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಇದರಿಂದ ಇಡೀ ಅಥಣಿ ತಾಲೂಕಿನ ಇಂಗಳಗಾಂವ ಹುಲಗಬಾಳ, ಖವಟಕೊಪ್ಪ, ಪಿ ಕೆ ನಾಗನೂರ ಸೇರಿದಂತೆ ಹಲವು ಗ್ರಾಮಗಳ ತೋಟದ ಮನೆಗಳಿಗೆ ನೀರು ನುಗ್ಗಿದೆ. ತಾಲೂಕು ಆಡಳಿತದಿಂದ ಜನರ ಸ್ಥಳಾಂತರ ಮಾಡಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ತಹಶೀಲ್ದಾರ್ ದುಂಡಪ್ಪ ಕೋಮಾರ ಮಾತನಾಡಿ, ಅಥಣಿ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಇನ್ನೂ ಎರಡು ದಿನಗಳ ಕಾಲ ಪ್ರವಾಹ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ ಎಂದಿದ್ದಾರೆ.


ಕೃಷ್ಣಾ ನದಿ ತೀರದ ಜನರು ಕಾಳಜಿ ಕೇಂದ್ರಗಳಿಗೆ ಬರುವ ಮೂಲಕ ಜೀವರಕ್ಷಣೆಗೆ ಆದ್ಯತೆ ಕೊಡಬೇಕು. ಸಂತ್ರಸ್ತರಿಗೆ ಸರ್ಕಾರದ ಸಮರ್ಪಕ ಪರಿಹಾರ ಸಿಗುವ ಭರವಸೆ ಇದ್ದು, ಪ್ರವಾಹದಂತಹ ಸಂಕಷ್ಟದ ಸಮಯದಲ್ಲಿ ಆದಷ್ಟು ಬೇಗ ಗ್ರಾಮಗಳಿಂದ ಹೊರಗೆ ಬಂದು ಸುರಕ್ಷಿತ ತಾಣ ಸೇರಬೇಕೆಂದು ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು