2:28 PM Thursday30 - April 2026
ಬ್ರೇಕಿಂಗ್ ನ್ಯೂಸ್
ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು

ಇತ್ತೀಚಿನ ಸುದ್ದಿ

ಕೃಷ್ಣಾ ನದಿ ಸೇರಿದ 3 ಲಕ್ಷ ಕ್ಯೂಸೆಕ್ ನೀರು: ಅಥಣಿ ತಾಲೂಕಿನಲ್ಲಿ ಭಾರಿ ಪ್ರವಾಹ, ಗುಳೆ ಹೊರಟ ಸಾವಿರಾರು ಗ್ರಾಮಸ್ಥರು 

25/07/2021, 19:09

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಕೃಷ್ಣಾ ಸೇರಿದಂತೆ ಬೆಳಗಾವಿಯ ಎಲ್ಲ ಪ್ರಮುಖ ನದಿಗಳು ತುಂಬಿ ಹರಿಯುತ್ತಿರುವ ಪರಿಣಾಮ ಅಥಣಿ ತಾಲೂಕಿನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನದಿ ತೀರದ ಗ್ರಾಮಗಳಿಗೆ ನೀರು ನುಗ್ಗಿದೆ. ಸಾವಿರಾರು ಮಂದಿ ಗ್ರಾಮಸ್ಥರು ಗುಳೆ ಹೋಗಿದ್ದಾರೆ.

ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 3 ಲಕ್ಷ ಕ್ಯೂಸೆಕ್ ಗೂ ಅಧಿಕ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ಇದರಿಂದ ಇಡೀ ಅಥಣಿ ತಾಲೂಕಿನ ಇಂಗಳಗಾಂವ ಹುಲಗಬಾಳ, ಖವಟಕೊಪ್ಪ, ಪಿ ಕೆ ನಾಗನೂರ ಸೇರಿದಂತೆ ಹಲವು ಗ್ರಾಮಗಳ ತೋಟದ ಮನೆಗಳಿಗೆ ನೀರು ನುಗ್ಗಿದೆ. ತಾಲೂಕು ಆಡಳಿತದಿಂದ ಜನರ ಸ್ಥಳಾಂತರ ಮಾಡಲಾಗುತ್ತಿದೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ತಹಶೀಲ್ದಾರ್ ದುಂಡಪ್ಪ ಕೋಮಾರ ಮಾತನಾಡಿ, ಅಥಣಿ ತಾಲೂಕಿನ ನದಿ ತೀರದ ಗ್ರಾಮಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಇನ್ನೂ ಎರಡು ದಿನಗಳ ಕಾಲ ಪ್ರವಾಹ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ ಎಂದಿದ್ದಾರೆ.


ಕೃಷ್ಣಾ ನದಿ ತೀರದ ಜನರು ಕಾಳಜಿ ಕೇಂದ್ರಗಳಿಗೆ ಬರುವ ಮೂಲಕ ಜೀವರಕ್ಷಣೆಗೆ ಆದ್ಯತೆ ಕೊಡಬೇಕು. ಸಂತ್ರಸ್ತರಿಗೆ ಸರ್ಕಾರದ ಸಮರ್ಪಕ ಪರಿಹಾರ ಸಿಗುವ ಭರವಸೆ ಇದ್ದು, ಪ್ರವಾಹದಂತಹ ಸಂಕಷ್ಟದ ಸಮಯದಲ್ಲಿ ಆದಷ್ಟು ಬೇಗ ಗ್ರಾಮಗಳಿಂದ ಹೊರಗೆ ಬಂದು ಸುರಕ್ಷಿತ ತಾಣ ಸೇರಬೇಕೆಂದು ಮನವಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು