6:47 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಕ್ರೀಡಾಪಟುಗಳು ಗೆದ್ದಾಗ ಬೀಗದೆ, ಸೋತಾಗ ಕುಗ್ಗದೆ ಮುನ್ನುಗ್ಗಿದರೆ ಮಾತ್ರ ಸಾಧನೆ ಸಾಧ್ಯ: ವಿಜಯ ರಾಮೇಗೌಡ

06/02/2023, 12:31

ಮನು ಮಾಕವಳ್ಳಿ ಕೆ.ಆರ್. ಪೇಟೆ ಮಂಡ್ಯ

info.reporterkarnataka@gmail.com

ಕ್ರೀಡಾಪಟುಗಳು ಗೆದ್ದಾಗ ಬೀಗದೆ, ಸೋತಾಗ ಕುಗ್ಗದೆ ಇದ್ದರೆ ಮಾತ್ರ ಕ್ರೀಡಾಕ್ಷೇತ್ರದಲ್ಲಿ ಸಾಧನೆ ಗೈಯಲು ಸಾಧ್ಯ,ಎಂದು ಸಮಾಜ ಸೇವಕ, ಕಾಂಗ್ರೆಸ್ ಮುಖಂಡ ವಿಜಯ ರಾಮೇಗೌಡ ಹೇಳಿದರು.

ಕೆ ಆರ್ ಪೇಟೆ ತಾಲೂಕಿನ ಹೊಸಹೊಳಲು ಯುವಕರ ಬಳಗದ ವತಿಯಿಂದ ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಆವರಣದಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡಾಪಟುಗಳು ಗೆದ್ದಾಗ ಬೀಗದೆ ಸೋತಾಗ ಕುಗ್ಗದೆ ಕ್ರೀಡಾ ಆಸಕ್ತಿಯಿಂದ ಆಟವಾಡುತ್ತಾ ಹೊರ ಜಿಲ್ಲೆ ಮತ್ತು ರಾಜ್ಯ ಆಟಗಾರರನ್ನು ಮತ್ತು ಪ್ರೇಕ್ಷಕರನ್ನ ಗೌರವಿಸುವ ಮೂಲಕ ಕ್ರೀಡಾ ಕ್ಷೇತ್ರದ ಮೌಲ್ಯ ಹೆಚ್ಚಿಸಿಬೇಕು. ನಾನು ಒಬ್ಬ ಕ್ರೀಡಾಪಟು ಕ್ರೀಡಾಸಕ್ತರ ಪ್ರೋತ್ಸಾಹಕ್ಕೆ ಮತ್ತು ಸಮಾಜಮುಖಿ ಕಾರ್ಯಕ್ರಮಗಳಿಗೆ ಮಿತ್ರ ಫೌಂಡೇಶನ್ ಮೂಲಕ ನನ್ನ ಕೈಲಾದ ಅಳಿಲು ಸೇವೆ ಸಲ್ಲಿಸುತ್ತಿದ್ದೇನೆ,. ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಲು ಕ್ರೀಡೆ ಅಗತ್ಯವಾಗಿದೆ ಈಗಿನ ಯುವಜನತೆ ಗುಣಮಟ್ಟದ ಶಿಕ್ಷಣ ಜೊತೆ ಕ್ರೀಡೆ ರೂಡಿಸಿಕೊಂಡರೆ ಉಜ್ವಲ ಭವಿಷ್ಯ ಕಾಣಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.


ಬಳಿಕ ಮಾತನಾಡಿದ ಆರ್ ಟಿ ಓ ಮಲ್ಲಿಕಾರ್ಜುನ್, ಗ್ರಾಮೀಣ ಭಾಗದ ಯುವಕಲ್ಲಿ ಅತ್ಯುತ್ತಮ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಆಟಗಾರರಿದ್ದಾರೆ.ಆದರೆ ಸೂಕ್ತ ವೇದಿಕೆ ಇಲ್ಲದೆ ಅವಕಾಶ ವಂಚಿತರಾಗಿ ಬೆಳಕಿಗೆ ಬರುತ್ತಿಲ್ಲ. ಕ್ರೀಡಾಸಕ್ತರಿಂದ ಆಯೋಜಿಸಿರುವ ಕಾರ್ಯಕ್ರಮಗಳಲ್ಲಿ ರಾಜ್ಯಮಟ್ಟದ ಕ್ರೀಡಾಕೂಟ ಸಂಘಟಿಸುವುದರಿಂದ ನೈಪುಣ್ಯತೆ ಉಳ್ಳ ಆಟಗಾರರು ಬೆಳಕಿಗೆ ಬರಲು ಸಾಧ್ಯ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಬಿ. ಪ್ರಕಾಶ್, ಕಾಂಗ್ರೆಸ್ ಯುವ ಮುಖಂಡ ಡಾ:ಕೆ ಸಿ ಶ್ರೀಕಾಂತ್, ಪುರಸಭಾ ಸದಸ್ಯ ಹೊಸಹೊಳಲು ಪ್ರವೀಣ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಮಾಧವ ಪ್ರಸಾದ್, ಪುರಸಭಾ ಸದಸ್ಯ ಡಿ. ಪ್ರೇಮ್ ಕುಮಾರ್, ಕಾಂಗ್ರೆಸ್ ಮುಖಂಡ ರಮೇಶ್, ಯೂತ್ ಕಾಂಗ್ರೆಸ್ ಅಧ್ಯಕ್ಷ ಸಿ ಬಿ ಚೇತನ್ ಕುಮಾರ್, ಪುರಸಭಾ ಮಾಜಿ ಸದಸ್ಯ ರೂಪ ಪ್ರಕಾಶ್, ಕಾಂಗ್ರೆಸ್ ಹಿರಿಯ ಮುಖಂಡ ಅಗ್ರಹಾರಬಾಚಳ್ಳಿ ಕುಮಾರ್, ಹೊಸ ಒಡಲು ಯುವಕರ ಬಳಗದ ಯುವಕರು ಹಾಗೂ ಕ್ರೀಡಾಪಟುಗಳು ಸೇರಿದಂತೆ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು