4:24 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಕೃಷಿ ಭೂಮಿ ವಶಕ್ಕೆ ನೋಟಿಸು: ರೊಚ್ಚಿಗೆದ್ದ ರೈತರಿಂದ ಯೋಜನಾ ಕಚೇರಿಗೆ ಮುತ್ತಿಗೆ; ಪೋಲಿಸರ ಮಧ್ಯಪ್ರವೇಶ

04/10/2021, 17:54

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಅಥಣಿ ಗ್ರಾಮೀಣ ಪಂಚಾಯಿತಿ ವ್ಯಾಪ್ತಿಯ ರಿ. ಸ ನಂ 839 ಹಾಗೂ ಅಕ್ಕ ಪಕ್ಕದ ಜಮೀನು ಸೇರಿದಂತೆ ಅಂದಾಜು 130 ಎಕರೆ ರೈತರ ಫಲವತ್ತಾದ ಭೂಮಿ ವಶಪಡಿಸಿಕೊಳ್ಳುವ ನೋಟಿಸ್ ಬಂದ ಹಿನ್ನಲೆಯಲ್ಲಿ ಇಲಾಖೆಯ ನಡೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರೈತರು, ಮಹಿಳೆಯರು ಮತ್ತು ಮಕ್ಕಳು ಹಿಪ್ಪರಗಿ ಅಣೆಕಟ್ಟು ಯೋಜನೆಯ ಕಚೇರಿಗೆ ಮುತ್ತಿಗೆ ಹಾಕಿ ಏಕಾಏಕಿ ಪ್ರತಿಭಟನೆ ನಡೆಸಿದರು.


ನೀರಾವರಿ ಅಧಿಕಾರಿಗಳೊಡನೆ ಮಾತಿನ ಚಕಮಕಿ ನಡೆಸಿ, ಪ್ರತಿಭಟನೆ ತೀವೃಗೊಂಡ ಹಿನ್ನಲೆ, ನೂಕು ನುಗ್ಗಲು ಉಂಟಾಗಿ ಪೋಲಿಸರು ಮಧ್ಯಪ್ರವೇಶ ಮಾಡಿ ಪರಿಸ್ಥಿತಿಯನ್ನು ತಿಳಿಗೊಳಿಸುವ ಪ್ರಸಂಗ ಜರುಗಿತು.

ನೆರೆ ಸಂತ್ರಸ್ತರ ಪುನರ್ವಸತಿ ನಿರ್ಮಾಣ ಕೇಂದ್ರಕ್ಕೆ ನಮ್ಮ ಫಲವತ್ತಾದ ಭೂಮಿಯನ್ನು ನಾವು ಬಿಟ್ಟುಕೊಡುವುದಿಲ್ಲ, ಈ ಭೂಮಿಗಳು ಹೋದರೆ ನಾವು ಶಾಶ್ವತವಾಗಿ ಸಂತ್ರಸ್ತ ರಾಗುತ್ತೇವೆ. ನೆರೆ ಸಂತ್ರಸ್ತರಿಗೆ ಬೇರೆಡೆಗೆ ವ್ಯವಸ್ಥೆ  ಮಾಡುವಂತೆ ಅಧಿಕಾರಿಗಳಿಗೆ ಪಟ್ಟು ಹಿಡಿದಿದ್ದರು.


ಈ ವೇಳೆ ಇಲಾಖೆಯ ಆರ್ ಜಿ ರಾಠೋಡ, ಎ ಆರ್ ಖರೋಷಿ, ಪಿಎಸ್ಐ ಕುಮಾರ ಹಾಡಕರ ಸೇರಿದಂತೆ ಅನೇಕ ಪೋಲಿಸರು, ಇಲಾಖೆ ಅಧಿಕಾರಿಗಳು ಹಾಗೂ ಇತರ ರೈತರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು